<p><strong>ಬಿಡದಿ</strong>: ಬಾಲಗಂಗಾಧರನಾಥ ಸ್ವಾಮೀಜಿ ಜನ್ಮಸ್ಥಳ ಬಾನಂದೂರಿನಿಂದ ಆದಿಚುಂಚನಗಿರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಶುಕ್ರವಾರ ಬಸ್ ಟಿಕೆಟ್ ₹127 ಚೀಟಿ ಪಡೆಯುವ ಮೂಲಕ ಚಾಲನೆ ನೀಡಿದರು.</p>.<p>ಶುಕ್ರವಾರ ಬಾನಂದೂರು ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಅನ್ನದಾನೇಶ್ವರನಾಥ ಸ್ವಾಮೀಜಿ ಮೊದಲ ಟಿಕೆಟ್ ಪಡೆದು ಶುಭ ಹಾರೈಸಿದರು. ಈ ವೇಳೆ ಮಾತನಾಡಿದ ಅವರು, ಚುಂಚನಗಿರಿಗೆ ನೇರ ಬಸ್ ಸಂಚಾರ ಆರಂಭಿಸುವ ಮೂಲಕ ಸಾರಿಗೆ ಸಂಸ್ಥೆ ಈ ಭಾಗದ ಜನರ ಬಹುದಿನದ ಕನಸು ನನಸು ಮಾಡಿದೆ ಎಂದು ಶ್ಲಾಘಿಸಿದರು.</p>.<p>ಈ ಭಾಗದ ಜನರು ಬೆಂಗಳೂರು ಅಥವಾ ಮಂಡ್ಯ ಮತ್ತಿತರ ಸ್ಥಳಗಳಿಂದ ಸುತ್ತಾಡಿ ಚುಂಚನಗಿರಿಗೆ ತೆರಳಬೇಕಾಗಿತ್ತು. ಆದರೆ, ಈ ಗ್ರಾಮದ ಗಂಗಾಧರಯ್ಯ ಅವರ ಪರಿಶ್ರಮದಿಂದ ನೇರ ಬಸ್ ಸೌಲಭ್ಯ ಸಿಕ್ಕಿದೆ. ಈ ಬಸ್ ಮರಳವಾಡಿಯಿಂದ ಬೆಳಗ್ಗೆ 8ಕ್ಕೆ ಹೊರಟು ಹಾರೋಹಳ್ಳಿ, ಬಿಡದಿ, ರಾಮನಗರ, ಮಂಡ್ಯ, ನಾಗಮಂಗಲ ಮುಖಂತರ ಕ್ಷೇತ್ರ ತಲುಪಲಿದೆ. ಈ ಬಸ್ ಶಾಶ್ವತವಾಗಿ ಉಳಿಯಬೇಕು ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಮಾತನಾಡಿ, ಬಾನಂದೂರು ಗ್ರಾಮದಲ್ಲಿ ಜನಿಸಿದ ಬಾಲಗಂಗಾಧರನಾಥ ಸ್ವಾಮೀಜಿ ಈ ಜಗತ್ತು ಕಂಡ ಮಹಾ ಪುರುಷ. ಅವರ ಹುಟ್ಟೂರಿನಿಂದ ಆದಿಚುಂಚನಗಿರಿ ಕ್ಷೇತ್ರಕ್ಕೆ ನೇರ ಬಸ್ ಸೌಲಭ್ಯ ಈ ಭಾಗದ ಜನರಿಗೆ ಅನುಕೂಲವಾಗಿದೆ. ಈ ಭಾಗದ ಬಹುದಿನದ ಸಮಸ್ಯೆ ಇದೀಗ ಬಗೆಹರಿದಿದೆ ಎಂದರು.</p>.<p>ಕೆ.ಎಸ್.ಆರ್.ಟಿ.ಸಿ ರಾಮನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸಮೂರ್ತಿ, ಬಸ್ ಚಾಲಕ ನಿರ್ವಾಹಕ ವೆಂಕಟೇಶ್ ಅವರನ್ನು ಗ್ರಾಮಸ್ಥರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.</p>.<p>ಬಿಡದಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಉಮೇಶ್, ಬಿಜಿಎಸ್ ಪ್ರಗತಿಪರ ವೇದಿಕೆ ಪದಾಧಿಕಾರಿಗಳಾದ ಗಂಗಾಧರಯ್ಯ, ಬಿ.ಎಂ.ಕುಮಾರ್, ನಂಜುಂಡಿ ಬಾನಂದೂರು, ರೇಣುಕಯ್ಯ, ಕೇಶವಮೂರ್ತಿ, ಭಾನುಪ್ರಕಾಶ್, ಶಿವಣ್ಣ, ಸಂತೋಷ್, ಗಂಗಾಧರ್, ಕುಮಾರ್, ಜಯಕುಮಾರ್, ಬಿ.ಕೆ.ವಿಠಲ್, ಜಾನಪದ ಗಾಯಕಿ ಬೋರಮ್ಮ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ</strong>: ಬಾಲಗಂಗಾಧರನಾಥ ಸ್ವಾಮೀಜಿ ಜನ್ಮಸ್ಥಳ ಬಾನಂದೂರಿನಿಂದ ಆದಿಚುಂಚನಗಿರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಶುಕ್ರವಾರ ಬಸ್ ಟಿಕೆಟ್ ₹127 ಚೀಟಿ ಪಡೆಯುವ ಮೂಲಕ ಚಾಲನೆ ನೀಡಿದರು.</p>.<p>ಶುಕ್ರವಾರ ಬಾನಂದೂರು ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಅನ್ನದಾನೇಶ್ವರನಾಥ ಸ್ವಾಮೀಜಿ ಮೊದಲ ಟಿಕೆಟ್ ಪಡೆದು ಶುಭ ಹಾರೈಸಿದರು. ಈ ವೇಳೆ ಮಾತನಾಡಿದ ಅವರು, ಚುಂಚನಗಿರಿಗೆ ನೇರ ಬಸ್ ಸಂಚಾರ ಆರಂಭಿಸುವ ಮೂಲಕ ಸಾರಿಗೆ ಸಂಸ್ಥೆ ಈ ಭಾಗದ ಜನರ ಬಹುದಿನದ ಕನಸು ನನಸು ಮಾಡಿದೆ ಎಂದು ಶ್ಲಾಘಿಸಿದರು.</p>.<p>ಈ ಭಾಗದ ಜನರು ಬೆಂಗಳೂರು ಅಥವಾ ಮಂಡ್ಯ ಮತ್ತಿತರ ಸ್ಥಳಗಳಿಂದ ಸುತ್ತಾಡಿ ಚುಂಚನಗಿರಿಗೆ ತೆರಳಬೇಕಾಗಿತ್ತು. ಆದರೆ, ಈ ಗ್ರಾಮದ ಗಂಗಾಧರಯ್ಯ ಅವರ ಪರಿಶ್ರಮದಿಂದ ನೇರ ಬಸ್ ಸೌಲಭ್ಯ ಸಿಕ್ಕಿದೆ. ಈ ಬಸ್ ಮರಳವಾಡಿಯಿಂದ ಬೆಳಗ್ಗೆ 8ಕ್ಕೆ ಹೊರಟು ಹಾರೋಹಳ್ಳಿ, ಬಿಡದಿ, ರಾಮನಗರ, ಮಂಡ್ಯ, ನಾಗಮಂಗಲ ಮುಖಂತರ ಕ್ಷೇತ್ರ ತಲುಪಲಿದೆ. ಈ ಬಸ್ ಶಾಶ್ವತವಾಗಿ ಉಳಿಯಬೇಕು ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಮಾತನಾಡಿ, ಬಾನಂದೂರು ಗ್ರಾಮದಲ್ಲಿ ಜನಿಸಿದ ಬಾಲಗಂಗಾಧರನಾಥ ಸ್ವಾಮೀಜಿ ಈ ಜಗತ್ತು ಕಂಡ ಮಹಾ ಪುರುಷ. ಅವರ ಹುಟ್ಟೂರಿನಿಂದ ಆದಿಚುಂಚನಗಿರಿ ಕ್ಷೇತ್ರಕ್ಕೆ ನೇರ ಬಸ್ ಸೌಲಭ್ಯ ಈ ಭಾಗದ ಜನರಿಗೆ ಅನುಕೂಲವಾಗಿದೆ. ಈ ಭಾಗದ ಬಹುದಿನದ ಸಮಸ್ಯೆ ಇದೀಗ ಬಗೆಹರಿದಿದೆ ಎಂದರು.</p>.<p>ಕೆ.ಎಸ್.ಆರ್.ಟಿ.ಸಿ ರಾಮನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸಮೂರ್ತಿ, ಬಸ್ ಚಾಲಕ ನಿರ್ವಾಹಕ ವೆಂಕಟೇಶ್ ಅವರನ್ನು ಗ್ರಾಮಸ್ಥರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.</p>.<p>ಬಿಡದಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಉಮೇಶ್, ಬಿಜಿಎಸ್ ಪ್ರಗತಿಪರ ವೇದಿಕೆ ಪದಾಧಿಕಾರಿಗಳಾದ ಗಂಗಾಧರಯ್ಯ, ಬಿ.ಎಂ.ಕುಮಾರ್, ನಂಜುಂಡಿ ಬಾನಂದೂರು, ರೇಣುಕಯ್ಯ, ಕೇಶವಮೂರ್ತಿ, ಭಾನುಪ್ರಕಾಶ್, ಶಿವಣ್ಣ, ಸಂತೋಷ್, ಗಂಗಾಧರ್, ಕುಮಾರ್, ಜಯಕುಮಾರ್, ಬಿ.ಕೆ.ವಿಠಲ್, ಜಾನಪದ ಗಾಯಕಿ ಬೋರಮ್ಮ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>