<p><strong>ರಾಮನಗರ:</strong> ರಾಜ್ಯೋತ್ಸವ ಪ್ರಶಸ್ತಿ ಸಿಕ್ಕ ಸಂಭ್ರಮದಲ್ಲಿ ಯುವ ಬ್ರಿಗೇಡ್ ತಂಡದ ಸದಸ್ಯರು ನಗರದ ವಡೇರಹಳ್ಳಿ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿ ಸಂಭ್ರಮಿಸಿದರು.</p>.<p>ಯುವ ಬ್ರೀಗೇಡ್ನ ಜಿಲ್ಲಾ ಸಂಪರ್ಕ ಪ್ರಮುಖ ಕೃಷ್ಣ ಎಸ್. ರಾಜು ಮಾತನಾಡಿ, "ರಾಜ್ಯ ಸರ್ಕಾರವು ತಂಡಕ್ಕೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದೆ. ಈ ಕ್ಷಣವನ್ನು ವಿಭಿನ್ನವಾಗಿ ಆಚರಿಸುವ ಸಲುವಾಗಿ ತಂಡದ ವತಿಯಿಂದ ಬಸ್ ನಿಲ್ದಾಣ ಶುಚಿಗೊಳಿಸುವ ಕಾರ್ಯ ಮಾಡಲಾಗಿದೆ. ವಡೇರಹಳ್ಳಿಯ ತಂಗುದಾಣವನ್ನು 6-೭ ಗಂಟೆ ಶ್ರಮದಾನದ ಮೂಲಕ ಶುಚಿ ಮಾಡಿ ಕಾರ್ಯಕರ್ತರೇ ಬಣ್ಣ ಬೆಳೆದಿದ್ದಾರೆ. ಇದಕ್ಕೆ ಕೊಹಿನೂರು ಸಂದೇಶವನ್ನು ಬರೆಯಲಾಗಿದೆ ಎಂದು ಹೇಳಿದರು.</p>.<p>ವಡೇರಹಳ್ಳಿ ತಂಗುದಾಣದ ಆವರಣದಲ್ಲಿ ಬಸ್ ನಿಲ್ಲಿಸುವಂತೆ ಕೆಎಸ್ಆರ್ಟಿಸಿ ಅಧಿಕಾರಿಗಳಲ್ಲಿಮನವಿ ಮಾಡಿಕೊಂಡಿದ್ದೇವೆ. ಜತೆಗೆ, ಸುತ್ತಮುತ್ತಲಿನ ಗ್ರಾಮಸ್ಥರು ಸಹ ತಂಗುದಾಣವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಯುವ ಬ್ರಿಗೇಡ್ನ ಕಾರ್ಯಕರ್ತರಾದ ಜೆ.ಸಿ. ಮಂಜುನಾಥ್, ರುದ್ರೇಶ್, ಸುಹಾಸ್, ನಮಿತ್, ಈರಣ್ಣ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ರಾಜ್ಯೋತ್ಸವ ಪ್ರಶಸ್ತಿ ಸಿಕ್ಕ ಸಂಭ್ರಮದಲ್ಲಿ ಯುವ ಬ್ರಿಗೇಡ್ ತಂಡದ ಸದಸ್ಯರು ನಗರದ ವಡೇರಹಳ್ಳಿ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿ ಸಂಭ್ರಮಿಸಿದರು.</p>.<p>ಯುವ ಬ್ರೀಗೇಡ್ನ ಜಿಲ್ಲಾ ಸಂಪರ್ಕ ಪ್ರಮುಖ ಕೃಷ್ಣ ಎಸ್. ರಾಜು ಮಾತನಾಡಿ, "ರಾಜ್ಯ ಸರ್ಕಾರವು ತಂಡಕ್ಕೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದೆ. ಈ ಕ್ಷಣವನ್ನು ವಿಭಿನ್ನವಾಗಿ ಆಚರಿಸುವ ಸಲುವಾಗಿ ತಂಡದ ವತಿಯಿಂದ ಬಸ್ ನಿಲ್ದಾಣ ಶುಚಿಗೊಳಿಸುವ ಕಾರ್ಯ ಮಾಡಲಾಗಿದೆ. ವಡೇರಹಳ್ಳಿಯ ತಂಗುದಾಣವನ್ನು 6-೭ ಗಂಟೆ ಶ್ರಮದಾನದ ಮೂಲಕ ಶುಚಿ ಮಾಡಿ ಕಾರ್ಯಕರ್ತರೇ ಬಣ್ಣ ಬೆಳೆದಿದ್ದಾರೆ. ಇದಕ್ಕೆ ಕೊಹಿನೂರು ಸಂದೇಶವನ್ನು ಬರೆಯಲಾಗಿದೆ ಎಂದು ಹೇಳಿದರು.</p>.<p>ವಡೇರಹಳ್ಳಿ ತಂಗುದಾಣದ ಆವರಣದಲ್ಲಿ ಬಸ್ ನಿಲ್ಲಿಸುವಂತೆ ಕೆಎಸ್ಆರ್ಟಿಸಿ ಅಧಿಕಾರಿಗಳಲ್ಲಿಮನವಿ ಮಾಡಿಕೊಂಡಿದ್ದೇವೆ. ಜತೆಗೆ, ಸುತ್ತಮುತ್ತಲಿನ ಗ್ರಾಮಸ್ಥರು ಸಹ ತಂಗುದಾಣವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಯುವ ಬ್ರಿಗೇಡ್ನ ಕಾರ್ಯಕರ್ತರಾದ ಜೆ.ಸಿ. ಮಂಜುನಾಥ್, ರುದ್ರೇಶ್, ಸುಹಾಸ್, ನಮಿತ್, ಈರಣ್ಣ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>