ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣವೇಷಧಾರಿಯಾದ ಚನ್ನಪಟ್ಟಣದ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್

Last Updated 7 ಫೆಬ್ರುವರಿ 2020, 7:29 IST
ಅಕ್ಷರ ಗಾತ್ರ

ರಾಮನಗರ: ಸಚಿವ ಸ್ಥಾನ ಪಡೆಯಲು ಒಂದಲ್ಲ ಒಂದು ಬಗೆಯಲ್ಲಿ ಪ್ರಯತ್ನ ನಡೆಸಿರುವ ಚನ್ನಪಟ್ಟಣದ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಈಗ ಆರ್‌ಎಸ್ಎಸ್‌ ಗಣವೇಷಧಾರಿಯಾಗಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಪುತ್ರರಾದ ಧ್ಯಾನ್ ಹಾಗೂ ಶ್ರವಣ್ ಅವರೊಂದಿಗೆ ಗಣವೇಷ ತೊಟ್ಟು ಬೆಂಗಳೂರಿನ ತಮ್ಮ ನಿವಾಸದಲ್ಲಿ ಯೋಗೇಶ್ವರ್ ಫೋಟೊಗೆ ಪೋಸ್ ನೀಡಿದ್ದಾರೆ. ಇದೀಗ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಇದೇ 9ರಂದು ರಾಮನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಪಥ ಸಂಚಲನ ನಡೆಯಲಿದೆ. ಯೋಗೇಶ್ವರ್ ಗಣವೇಷಧಾರಿಯಾಗಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT