<p><strong>ಚನ್ನಪಟ್ಟಣ</strong>: ವಿರುಪಾಕ್ಷಿಪುರ ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್ ಹಾಗೂ ಕೆಲವು ನೌಕರ ವರ್ಗ ರೈತರ ಕೆಲಸ ಕಾರ್ಯಗಳಿಗೆ ಲಂಚ ಪಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್ಗೆ ಮನವಿ ಪತ್ರ ನೀಡಿದರು.</p>.<p>ವಿರುಪಾಕ್ಷಿಪುರ ನಾಡ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪ ತಹಶೀಲ್ದಾರ್ ದಿವಾಕರ್ ಹಾಗೂ ಕೆಲವು ನೌಕರರು ಸಾರ್ವಜನಿಕರಿಂದ ಲಂಚ ಪಡೆಯುತ್ತಿರುವುದರ ವಿಡಿಯೊ ನಮ್ಮ ಬಳಿ ಇದೆ. ಈ ವಿಡಿಯೊ ವೈರಲ್ ಆಗಿದೆ. ಅದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದರು.</p>.<p>ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ಕೆ.ಎನ್. ರಮೇಶ್, ಸಂಬಂಧಿಸಿದ ಅಧಿಕಾರಿಗಳ ಮೇಲೆ ದೂರು ಬಂದಿದ್ದು, ಈಗಾಗಲೇ ಆ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಘಟನೆ ಬಗ್ಗೆ ಸಮಗ್ರ ಮಾಹಿತಿ ಪಡೆಯಲಾಗುತ್ತಿದೆ. ಈ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗುವುದು. ಸಮಗ್ರವಾದ ತನಿಖೆ ನಡೆದು ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದುತಿಳಿಸಿದರು.</p>.<p>ತಾಲ್ಲೂಕಿನ ಎಲ್ಲಾ ನಾಡ ಕಚೇರಿಗಳಲ್ಲಿಯೂ ಲಂಚ ಬೇರು ಬಿಟ್ಟಿದೆ. ಅಲ್ಲದೆ ತಾಲ್ಲೂಕು ಕಚೇರಿಯಲ್ಲಿಯೂ ರೈತರ ಯಾವುದೇ ಕೆಲಸಗಳು ಅಗುತ್ತಿಲ್ಲ. ಹಣ ಕೊಟ್ಟರೆ ಮಾತ್ರ ಕೆಲಸವಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೆ ಅವರ ಹುದ್ದೆಯ ಗುರುತಿನ ಪತ್ರ ಇಲ್ಲದಿರುವುದರಿಂದ ಯಾವ ಅಧಿಕಾರಿಗಳೆಂದು ಗುರುತಿಸುವುದೇ ಸಮಸ್ಯೆಯಾಗಿದೆ. ಅಧಿಕಾರಿಗಳಿಂದ ಪ್ರಾರಂಭವಾಗಿ ಡಿ ಗ್ರೂಪ್ ನೌಕರರವರೆಗೂ ಗುರುತಿನ ಪತ್ರ ನೀಡುವಂತೆಒತ್ತಾಯಿಸಿದರು.</p>.<p>ಎಲ್ಲರಿಗೂ ಗುರುತಿನ ಪತ್ರವನ್ನು ನೀಡಲಾಗಿದೆ. ಅದನ್ನು ಹಾಕಿಕೊಂಡೇ ಕರ್ತವ್ಯ ನಿರ್ವಸುವಂತೆ ಅದೇಶ ನೀಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.</p>.<p>ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಅಣ್ಣಿಗೆರೆ ಮಲ್ಲಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎನ್. ರಾಜು, ಜಿಲ್ಲಾ ಗೌರವಾಧ್ಯಕ್ಷ ತಿಮ್ಮೇಗೌಡ, ತಾಲ್ಲೂಕು ಅಧ್ಯಕ್ಷ ರಾಮೇಗೌಡ, ಜಿಲ್ಲಾ ಕಾರ್ಯದರ್ಶಿ ಕೃಷ್ಣಪ್ಪ, ಪದಾಧಿಕಾರಿಗಳಾದ ಗುರುಲಿಂಗಯ್ಯ, ರವಿ, ಮೋಹನ್, ಜೈಕೃಷ್ಣ, ವಿಜಯ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ವಿರುಪಾಕ್ಷಿಪುರ ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್ ಹಾಗೂ ಕೆಲವು ನೌಕರ ವರ್ಗ ರೈತರ ಕೆಲಸ ಕಾರ್ಯಗಳಿಗೆ ಲಂಚ ಪಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್ಗೆ ಮನವಿ ಪತ್ರ ನೀಡಿದರು.</p>.<p>ವಿರುಪಾಕ್ಷಿಪುರ ನಾಡ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪ ತಹಶೀಲ್ದಾರ್ ದಿವಾಕರ್ ಹಾಗೂ ಕೆಲವು ನೌಕರರು ಸಾರ್ವಜನಿಕರಿಂದ ಲಂಚ ಪಡೆಯುತ್ತಿರುವುದರ ವಿಡಿಯೊ ನಮ್ಮ ಬಳಿ ಇದೆ. ಈ ವಿಡಿಯೊ ವೈರಲ್ ಆಗಿದೆ. ಅದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದರು.</p>.<p>ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ಕೆ.ಎನ್. ರಮೇಶ್, ಸಂಬಂಧಿಸಿದ ಅಧಿಕಾರಿಗಳ ಮೇಲೆ ದೂರು ಬಂದಿದ್ದು, ಈಗಾಗಲೇ ಆ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಘಟನೆ ಬಗ್ಗೆ ಸಮಗ್ರ ಮಾಹಿತಿ ಪಡೆಯಲಾಗುತ್ತಿದೆ. ಈ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗುವುದು. ಸಮಗ್ರವಾದ ತನಿಖೆ ನಡೆದು ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದುತಿಳಿಸಿದರು.</p>.<p>ತಾಲ್ಲೂಕಿನ ಎಲ್ಲಾ ನಾಡ ಕಚೇರಿಗಳಲ್ಲಿಯೂ ಲಂಚ ಬೇರು ಬಿಟ್ಟಿದೆ. ಅಲ್ಲದೆ ತಾಲ್ಲೂಕು ಕಚೇರಿಯಲ್ಲಿಯೂ ರೈತರ ಯಾವುದೇ ಕೆಲಸಗಳು ಅಗುತ್ತಿಲ್ಲ. ಹಣ ಕೊಟ್ಟರೆ ಮಾತ್ರ ಕೆಲಸವಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೆ ಅವರ ಹುದ್ದೆಯ ಗುರುತಿನ ಪತ್ರ ಇಲ್ಲದಿರುವುದರಿಂದ ಯಾವ ಅಧಿಕಾರಿಗಳೆಂದು ಗುರುತಿಸುವುದೇ ಸಮಸ್ಯೆಯಾಗಿದೆ. ಅಧಿಕಾರಿಗಳಿಂದ ಪ್ರಾರಂಭವಾಗಿ ಡಿ ಗ್ರೂಪ್ ನೌಕರರವರೆಗೂ ಗುರುತಿನ ಪತ್ರ ನೀಡುವಂತೆಒತ್ತಾಯಿಸಿದರು.</p>.<p>ಎಲ್ಲರಿಗೂ ಗುರುತಿನ ಪತ್ರವನ್ನು ನೀಡಲಾಗಿದೆ. ಅದನ್ನು ಹಾಕಿಕೊಂಡೇ ಕರ್ತವ್ಯ ನಿರ್ವಸುವಂತೆ ಅದೇಶ ನೀಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.</p>.<p>ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಅಣ್ಣಿಗೆರೆ ಮಲ್ಲಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎನ್. ರಾಜು, ಜಿಲ್ಲಾ ಗೌರವಾಧ್ಯಕ್ಷ ತಿಮ್ಮೇಗೌಡ, ತಾಲ್ಲೂಕು ಅಧ್ಯಕ್ಷ ರಾಮೇಗೌಡ, ಜಿಲ್ಲಾ ಕಾರ್ಯದರ್ಶಿ ಕೃಷ್ಣಪ್ಪ, ಪದಾಧಿಕಾರಿಗಳಾದ ಗುರುಲಿಂಗಯ್ಯ, ರವಿ, ಮೋಹನ್, ಜೈಕೃಷ್ಣ, ವಿಜಯ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>