<p>ಕುದೂರು(ಮಾಗಡಿ): ಬೈಕ್ಗಳು ಮತ್ತು ಸರಗಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುದೂರು ಪೊಲೀಸರು ಬಂಧಿಸಿದ್ದಾರೆ.</p>.<p>ತಿಪ್ಪಸಂದ್ರ ಹೋಬಳಿಯ ದೊಡ್ಡಸೋಮನಹಳ್ಳಿಯ ಮಾರುತಿ ಗೌಡ ಎಸ್. ಮತ್ತು ಸ್ವಾಮಿ ಬಂಧಿತರು. ಆರೋಪಿಗಳಿಂದ 15 ಬೈಕ್ಗಳು ಮತ್ತು 21 ಗ್ರಾಂ ತೂಕದ ₹ 95 ಸಾವಿರ ಬೆಲೆಬಾಳುವ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಸಂಜಯ್ ಎಂಬಾತನೊಂದಿಗೆ ಸೇರಿಕೊಂಡು ಮಾದನಾಯಕನಹಳ್ಳಿ, ಆರ್.ಎಂ.ಸಿ. ಯಾರ್ಡ್, ಬಾಗಲುಗುಂಟೆ ಸೇರಿದಂತೆ ಹಲವೆಡೆ ಆರೋಪಿಗಳು ಬೈಕ್ಗಳು ಮತ್ತು ಸರಗಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.</p>.<p>ಅಪರಾಧ ಪ್ರಕರಣವೊಂದರ ಪತ್ತೆ ಕಾರ್ಯಕ್ಕಾಗಿ ಪೊಲೀಸರು ಜೂನ್ 30ರಂದು ಬೆಳಿಗ್ಗೆ 10 ಗಂಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಸೂರಪ್ಪನಹಳ್ಳಿ ಗೇಟ್<br />ಬಳಿ ಪತ್ತೆ ಕಾರ್ಯದಲ್ಲಿ ತೊಡಗಿದ್ದಾಗ ಇಬ್ಬರು ವ್ಯಕ್ತಿಗಳು ನಂಬರ್ ಪ್ಲೇಟ್ ಇಲ್ಲದ ಬೈಕ್ ನಿಲ್ಲಿಸಿಕೊಂಡು ನಿಂತಿದ್ದರು. ಪೊಲೀಸರನ್ನು ಕಂಡ ಕೂಡಲೇ ಸ್ಥಳದಲ್ಲಿಯೇ ಬೈಕ್ ಬಿಟ್ಟು ಓಡಲಾರಂಭಿಸಿದರು. ಪೊಲೀಸರು ಅವರನ್ನು ಬೆನ್ನಟ್ಟಿ ಹಿಡಿದಾಗ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.</p>.<p>ಜಿಲ್ಲಾ ಎಸ್.ಪಿ ಗಿರೀಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಓಂಪ್ರಕಾಶ್, ಕುದೂರು ಠಾಣೆಯ ಪಿಐ ಕುಮಾರ್, ಪಿಎಸ್ಐ ಪುಟ್ಟೇಗೌಡ ಹಾಗೂ ಸಿಬ್ಬಂದಿಯಾದ ಸತೀಶ್, ಹೇಮಂತ್ಕುಮಾರ್, ನಾಗರಾಜು, ಶರತ್ ಕುಮಾರ್, ವೀರಭದ್ರಪ್ಪ ಅಂಗಡಿ, ಪುರು ಷೋತ್ತಮ್, ಚೇತನ್, ಶರಣಬಸು, ಸುಭಾಷ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುದೂರು(ಮಾಗಡಿ): ಬೈಕ್ಗಳು ಮತ್ತು ಸರಗಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುದೂರು ಪೊಲೀಸರು ಬಂಧಿಸಿದ್ದಾರೆ.</p>.<p>ತಿಪ್ಪಸಂದ್ರ ಹೋಬಳಿಯ ದೊಡ್ಡಸೋಮನಹಳ್ಳಿಯ ಮಾರುತಿ ಗೌಡ ಎಸ್. ಮತ್ತು ಸ್ವಾಮಿ ಬಂಧಿತರು. ಆರೋಪಿಗಳಿಂದ 15 ಬೈಕ್ಗಳು ಮತ್ತು 21 ಗ್ರಾಂ ತೂಕದ ₹ 95 ಸಾವಿರ ಬೆಲೆಬಾಳುವ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಸಂಜಯ್ ಎಂಬಾತನೊಂದಿಗೆ ಸೇರಿಕೊಂಡು ಮಾದನಾಯಕನಹಳ್ಳಿ, ಆರ್.ಎಂ.ಸಿ. ಯಾರ್ಡ್, ಬಾಗಲುಗುಂಟೆ ಸೇರಿದಂತೆ ಹಲವೆಡೆ ಆರೋಪಿಗಳು ಬೈಕ್ಗಳು ಮತ್ತು ಸರಗಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.</p>.<p>ಅಪರಾಧ ಪ್ರಕರಣವೊಂದರ ಪತ್ತೆ ಕಾರ್ಯಕ್ಕಾಗಿ ಪೊಲೀಸರು ಜೂನ್ 30ರಂದು ಬೆಳಿಗ್ಗೆ 10 ಗಂಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಸೂರಪ್ಪನಹಳ್ಳಿ ಗೇಟ್<br />ಬಳಿ ಪತ್ತೆ ಕಾರ್ಯದಲ್ಲಿ ತೊಡಗಿದ್ದಾಗ ಇಬ್ಬರು ವ್ಯಕ್ತಿಗಳು ನಂಬರ್ ಪ್ಲೇಟ್ ಇಲ್ಲದ ಬೈಕ್ ನಿಲ್ಲಿಸಿಕೊಂಡು ನಿಂತಿದ್ದರು. ಪೊಲೀಸರನ್ನು ಕಂಡ ಕೂಡಲೇ ಸ್ಥಳದಲ್ಲಿಯೇ ಬೈಕ್ ಬಿಟ್ಟು ಓಡಲಾರಂಭಿಸಿದರು. ಪೊಲೀಸರು ಅವರನ್ನು ಬೆನ್ನಟ್ಟಿ ಹಿಡಿದಾಗ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.</p>.<p>ಜಿಲ್ಲಾ ಎಸ್.ಪಿ ಗಿರೀಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಓಂಪ್ರಕಾಶ್, ಕುದೂರು ಠಾಣೆಯ ಪಿಐ ಕುಮಾರ್, ಪಿಎಸ್ಐ ಪುಟ್ಟೇಗೌಡ ಹಾಗೂ ಸಿಬ್ಬಂದಿಯಾದ ಸತೀಶ್, ಹೇಮಂತ್ಕುಮಾರ್, ನಾಗರಾಜು, ಶರತ್ ಕುಮಾರ್, ವೀರಭದ್ರಪ್ಪ ಅಂಗಡಿ, ಪುರು ಷೋತ್ತಮ್, ಚೇತನ್, ಶರಣಬಸು, ಸುಭಾಷ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>