ಸುನಿಲ್, ಸಂತೋಷ್, ಮಂಜುನಾಥ್ ಹಾಗೂ ರಾಘವೇಂದ್ರ ಮೃತಪಟ್ಟವರು. ಬೆಂಗಳೂರಿನಿಂದ ಹುಲಿಯೂರು ದುರ್ಗಕ್ಕೆ ಬರುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕೆರೆಗೆ ಉರುಳಿಬಿದ್ದಿದೆ. ಒಳಗಿದ್ದವರು ಹೊರಬರಲಾಗದೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.