ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕ್ರಾಂತಿ ಕವಿಗೋಷ್ಠಿ

Last Updated 15 ಜನವರಿ 2021, 3:20 IST
ಅಕ್ಷರ ಗಾತ್ರ

ಚನ್ನಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಜ. 17ರಂದು ತಾಲ್ಲೂಕಿನ ವಳಗೆರೆದೊಡ್ಡಿ ಗ್ರಾಮದಲ್ಲಿ ಸಂಕ್ರಾಂತಿ ಕವಿಗೋಷ್ಠಿ ಹಾಗೂ ಗೀತಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಂಗಭೂಮಿ ನಿರ್ದೇಶಕ ಸೀಬನಹಳ್ಳಿ ಪಿ. ಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಕವಿ ಕೂರಣಗೆರೆ ಕೃಷ್ಣಪ್ಪ ಅಧ್ಯಕ್ಷತೆ ವಹಿಸುವರು. ಕಸಾಪ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಬಿ.ಟಿ. ನಾಗೇಶ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಮತ್ತೀಕೆರೆ ಬಿ. ಚಲುವರಾಜು, ಗ್ರಾ.ಪಂ. ಸದಸ್ಯ ಎ. ಮನೋಹರ್ ಗೌಡ, ಮಳೂರು ಹೋಬಳಿ ಕಸಾಪ ಅಧ್ಯಕ್ಷ ರಾಜು ವಳಗೆರೆದೊಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಗಾಯಕರಾದ ಗೋವಿಂದಹಳ್ಳಿ ಶಿವಣ್ಣ, ಕೆ.ಎಚ್. ಕುಮಾರ್ ಗೀತಗಾಯನ ನಡೆಸಿಕೊಡಲಿದ್ದಾರೆ ಎಂದು ತಾಲ್ಲೂಕು ಕಸಾಪ ಕಾರ್ಯದರ್ಶಿ ಮಂಜೇಶ್ ಬಾಬು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT