ಚನ್ನಪಟ್ಟಣ: ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಕೂಡಲೇ ಪರಿಹರಿಸಬೇಕು ಎಂದು ಒತ್ತಾಯಿಸಿ ಶಿಕ್ಷಕರು, ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು ಶುಕ್ರವಾರ ಮತ್ತೀಕೆರೆ ಗ್ರಾ.ಪಂ. ಕಚೇರಿ ಎದುರು ತಟ್ಟೆ, ಲೋಟ ಹಿಡಿದು ಪ್ರತಿಭಟನೆ ನಡೆಸಿದರು.