ಶಿಕ್ಷಕಿ ಕೆ.ಆರ್.ಶಿಲ್ಪ ಮಾತನಾಡಿ, ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ನಡೆಸುವ ಎಲ್ಲ 800 ವಸತಿ ಶಾಲೆಗಳಲ್ಲಿ ಮಕ್ಕಳ ಸಂವಿಧಾನ ಕ್ಲಬ್ ಅನುಷ್ಠಾನಗೊಂಡಿದೆ. ಮಕ್ಕಳು ಸ್ಥಳೀಯ ಸರ್ಕಾರದೊಂದಿಗೆ ಭಾಗವಹಿಬೇಕು. ಮಕ್ಕಳ ಹಕ್ಕುಗಳು ಮತ್ತು ಜವಾಬ್ದಾರಿ, ದಿನನಿತ್ಯದ ಬದುಕಿನಲ್ಲಿ ವೈಜ್ಞಾನಿಕ ಮತ್ತು ವಿಮರ್ಶಾತ್ಮಕ ಆಲೋಚನೆ ಬೆಳೆಸಿಕೊಳ್ಳಬೇಕಿದೆ. ಸಮಾನತೆ, ನ್ಯಾಯ, ಭ್ರಾತೃತ್ವ, ಪ್ರಕೃತಿಯೊಂದಿಗೆ ಸಾಮರಸ್ಯ ಬೆಳೆಸಿಕೊಳ್ಳಬೇಕು. ಜ್ಞಾನ, ಪರಸ್ಪರ ಗೌರವ ಮನೋಭಾವ ಮತ್ತು ನಡವಳಿಕೆಯಲ್ಲಿ ಬದಲಾವಣೆ ತರಲು ಕ್ಲಬ್ಗಳ ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.