<p><strong>ಚನ್ನಪಟ್ಟಣ:</strong> ಬೆಂಗಳೂರಿನಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೊಮ್ಮಗಳು ಮೃತಪಟ್ಟ ವಿಷಯ ಕೇಳಿದ ತಾಲ್ಲೂಕಿನ ವಿರೂಪಸಂದ್ರ ಗ್ರಾಮದಲ್ಲಿದ್ದ ಆಕೆಯ ಅಜ್ಜಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.</p>.<p>ಬೆಂಗಳೂರಿನ ರಾಜಾಜಿನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೊಮ್ಮಗಳು ಗೀತಾ (21) ಮೃತಪಟ್ಟ ಸುದ್ದಿ ಕೇಳಿದ ಅಜ್ಜಿ ರಾಕಮ್ಮ (65) ಕುಸಿದು ಬಿದ್ದು ಹೃದಯಾಘಾದಿಂದ ಮೃತಪಟ್ಟರು.</p>.<p>ಮೂರು ತಿಂಗಳ ಹಿಂದೆ ಕನಕಪುರ ತಾಲ್ಲೂಕಿನ ಭೀಮಗೋಡನಹಳ್ಳಿ ಗ್ರಾಮದ ಸುನೀಲ್ ಎಂಬುವರ ಜೊತೆ ಗೀತಾ ಮದುವೆಯಾಗಿತ್ತು. ಬೆಂಗಳೂರಿನ ಮಲ್ಲೇಶ್ವರದಲ್ಲಿ ನೆಲೆಸಿದ್ದ ದಂಪತಿ, ಅಲ್ಲಿ ಪಾನಿಪುರಿ ಅಂಗಡಿ ಇಟ್ಟುಕೊಂಡಿದ್ದರು.</p>.<p>ದಂಪತಿ ಕಾರ್ಯನಿಮಿತ್ತ ಬೈಕ್ನಲ್ಲಿ ರಾಜಾಜಿ ನಗರಕ್ಕೆ ಹೋಗಿ ವಾಪಸ್ ಮಲ್ಲೇಶ್ವರಕ್ಕೆ ಬರುವಾಗ ಹಿಂದಿನಿಂದ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆಯಿತು.</p>.<p>ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಗೀತಾ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರು. ಪತಿ ಸುನೀಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.<br><br>ವಿರೂಪಸಂದ್ರ ಗ್ರಾಮದಲ್ಲಿದ್ದ ಅಜ್ಜಿ ರಾಕಮ್ಮ ಈ ಸುದ್ದಿ ಕೇಳಿ ಕುಸಿದು ಬಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಒಂದೇ ಎರಡು ಜೀವಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿತ್ತು.</p>.<p>ಗೀತಾ ಅವರ ಶವವನ್ನು ವಿರೂಪಸಂದ್ರ ಗ್ರಾಮಕ್ಕೆ ತರಲಾಯಿತು.ಗ್ರಾಮದ ರುದ್ರಭೂಮಿಯಲ್ಲಿ ಸಂಜೆ ಅಜ್ಜಿ ಹಾಗೂ ಮೊಮ್ಮಗಳನ್ನು ಅಂತ್ಯಕ್ರಿಯೆ ನೆರವೇರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಬೆಂಗಳೂರಿನಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೊಮ್ಮಗಳು ಮೃತಪಟ್ಟ ವಿಷಯ ಕೇಳಿದ ತಾಲ್ಲೂಕಿನ ವಿರೂಪಸಂದ್ರ ಗ್ರಾಮದಲ್ಲಿದ್ದ ಆಕೆಯ ಅಜ್ಜಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.</p>.<p>ಬೆಂಗಳೂರಿನ ರಾಜಾಜಿನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೊಮ್ಮಗಳು ಗೀತಾ (21) ಮೃತಪಟ್ಟ ಸುದ್ದಿ ಕೇಳಿದ ಅಜ್ಜಿ ರಾಕಮ್ಮ (65) ಕುಸಿದು ಬಿದ್ದು ಹೃದಯಾಘಾದಿಂದ ಮೃತಪಟ್ಟರು.</p>.<p>ಮೂರು ತಿಂಗಳ ಹಿಂದೆ ಕನಕಪುರ ತಾಲ್ಲೂಕಿನ ಭೀಮಗೋಡನಹಳ್ಳಿ ಗ್ರಾಮದ ಸುನೀಲ್ ಎಂಬುವರ ಜೊತೆ ಗೀತಾ ಮದುವೆಯಾಗಿತ್ತು. ಬೆಂಗಳೂರಿನ ಮಲ್ಲೇಶ್ವರದಲ್ಲಿ ನೆಲೆಸಿದ್ದ ದಂಪತಿ, ಅಲ್ಲಿ ಪಾನಿಪುರಿ ಅಂಗಡಿ ಇಟ್ಟುಕೊಂಡಿದ್ದರು.</p>.<p>ದಂಪತಿ ಕಾರ್ಯನಿಮಿತ್ತ ಬೈಕ್ನಲ್ಲಿ ರಾಜಾಜಿ ನಗರಕ್ಕೆ ಹೋಗಿ ವಾಪಸ್ ಮಲ್ಲೇಶ್ವರಕ್ಕೆ ಬರುವಾಗ ಹಿಂದಿನಿಂದ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆಯಿತು.</p>.<p>ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಗೀತಾ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರು. ಪತಿ ಸುನೀಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.<br><br>ವಿರೂಪಸಂದ್ರ ಗ್ರಾಮದಲ್ಲಿದ್ದ ಅಜ್ಜಿ ರಾಕಮ್ಮ ಈ ಸುದ್ದಿ ಕೇಳಿ ಕುಸಿದು ಬಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಒಂದೇ ಎರಡು ಜೀವಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿತ್ತು.</p>.<p>ಗೀತಾ ಅವರ ಶವವನ್ನು ವಿರೂಪಸಂದ್ರ ಗ್ರಾಮಕ್ಕೆ ತರಲಾಯಿತು.ಗ್ರಾಮದ ರುದ್ರಭೂಮಿಯಲ್ಲಿ ಸಂಜೆ ಅಜ್ಜಿ ಹಾಗೂ ಮೊಮ್ಮಗಳನ್ನು ಅಂತ್ಯಕ್ರಿಯೆ ನೆರವೇರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>