<p>ಚನ್ನಪಟ್ಟಣ: ಶುದ್ಧ ಕುಡಿಯುವ ನೀರು ಆರೋಗ್ಯಕರ ಸಮಾಜದ ಮೂಲಾಧಾರ. ಪ್ರತಿಯೊಬ್ಬರೂ ಶುದ್ಧ ಕುಡಿಯುವ ನೀರು ಉಪಯೋಗಿಸಬೇಕು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಸಲಹೆ ನೀಡಿದರು.</p>.<p>ಭಾನುವಾರ ತಾಲ್ಲೂಕಿನ ವಿವಿಧೆಡೆ ಸಂಸದರ ನಿಧಿ ಹಾಗೂ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಯೋಜನೆ ಅಡಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಮತ್ತು ಸಾರ್ವಜನಿಕ ಸೌಕರ್ಯ ಪ್ರತಿ ನಾಗರಿಕನಿ ಮೂಲಭೂತ ಹಕ್ಕು. ಇದೇ ರೀತಿ ಬಸ್ ತಂಗುದಾಣ ನಿರ್ಮಾಣವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.</p>.<p>ರಾಮನರಸಿಂಹರಾಜಪುರ, ಶೀರಗುಡ್ಡ, ರಾಂಪುರ, ಕೂಡ್ಲೂರು, ಸಂತೆಮೊಗೇನಹಳ್ಳಿದೊಡ್ಡಿ, ಸುಳ್ಳೇರಿ ಮತ್ತು ಎ.ವಿ.ಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಬಸ್ ತಂಗುದಾಣ ಕಾಮಗಾರಿ ಉದ್ಘಾಟಿಸಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಯಮುತ್ತು, ತಾಲ್ಲೂಕು ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಡಾ.ಸುನೀತಾ ಮಹೇಶ್ವರಿ, ಡಾ. ಅರ್ಜುನ್ ಕಲ್ಯಾಣಪುರ, ದೀಪಿಕಾ ಬೇಡಿ, ಅಶ್ವಿನಿ ಸಿನ್ಹಾ, ಧನಲಕ್ಷ್ಮಿ, ವನಿಶ್ರೀ, ಸುಮಾ, ಅನಿಂದಿತಾ ಚೌಧುರಿ, ಸುರೇಶ್ ಕುಮಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-14-1772439886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ಶುದ್ಧ ಕುಡಿಯುವ ನೀರು ಆರೋಗ್ಯಕರ ಸಮಾಜದ ಮೂಲಾಧಾರ. ಪ್ರತಿಯೊಬ್ಬರೂ ಶುದ್ಧ ಕುಡಿಯುವ ನೀರು ಉಪಯೋಗಿಸಬೇಕು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಸಲಹೆ ನೀಡಿದರು.</p>.<p>ಭಾನುವಾರ ತಾಲ್ಲೂಕಿನ ವಿವಿಧೆಡೆ ಸಂಸದರ ನಿಧಿ ಹಾಗೂ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಯೋಜನೆ ಅಡಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಮತ್ತು ಸಾರ್ವಜನಿಕ ಸೌಕರ್ಯ ಪ್ರತಿ ನಾಗರಿಕನಿ ಮೂಲಭೂತ ಹಕ್ಕು. ಇದೇ ರೀತಿ ಬಸ್ ತಂಗುದಾಣ ನಿರ್ಮಾಣವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.</p>.<p>ರಾಮನರಸಿಂಹರಾಜಪುರ, ಶೀರಗುಡ್ಡ, ರಾಂಪುರ, ಕೂಡ್ಲೂರು, ಸಂತೆಮೊಗೇನಹಳ್ಳಿದೊಡ್ಡಿ, ಸುಳ್ಳೇರಿ ಮತ್ತು ಎ.ವಿ.ಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಬಸ್ ತಂಗುದಾಣ ಕಾಮಗಾರಿ ಉದ್ಘಾಟಿಸಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಯಮುತ್ತು, ತಾಲ್ಲೂಕು ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಡಾ.ಸುನೀತಾ ಮಹೇಶ್ವರಿ, ಡಾ. ಅರ್ಜುನ್ ಕಲ್ಯಾಣಪುರ, ದೀಪಿಕಾ ಬೇಡಿ, ಅಶ್ವಿನಿ ಸಿನ್ಹಾ, ಧನಲಕ್ಷ್ಮಿ, ವನಿಶ್ರೀ, ಸುಮಾ, ಅನಿಂದಿತಾ ಚೌಧುರಿ, ಸುರೇಶ್ ಕುಮಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-14-1772439886</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>