<p><strong>ಚನ್ನಪಟ್ಟಣ</strong>: ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸಮಾಧಿ ಸ್ಥಳವನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಿ ಪ್ರತಿಮೆ ನಿರ್ಮಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ ಒತ್ತಾಯಿಸಿದರು.</p>.<p>ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಸಮಾಧಿ ಸ್ಥಳದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವರ್ಷಗಳಿಂದ ಸಾರ್ವಜನಿಕರ ಒತ್ತಾಸೆ ನಿರ್ಲಕ್ಷ್ಯಿಸಿರುವ ಜಿಲ್ಲೆ ಹಾಗೂ ತಾಲ್ಲೂಕು ಆಡಳಿತದ ನಿರ್ಲಕ್ಷ್ಯ ಖಂಡನೀಯ ಎಂದು ಆರೋಪಿಸಿದರು.</p>.<p>‘ನಾಡಿನ ಅಪ್ರತಿಮ ರಾಜಕಾರಣಿ, ದೂರದೃಷ್ಟಿ ವಿಧಾನಸೌಧ ನಿರ್ಮಾತೃ ಸಮಾಧಿ ಸ್ಥಳ ಗೊತ್ತಿಲ್ಲದಂತೆ ಆಡಳಿತ ವರ್ತಿಸುತ್ತಿದೆ. ಬದುಕಿದ್ದಾಗ ಅವಮಾನ, ಮರಣ ನಂತರವೂ ಅವಮಾನ. ಕನಿಷ್ಠ ಸೌಜನ್ಯವೂ ಇಲ್ಲ’ ಎಂದು ಕಿಡಿಕಾರಿದರು.</p>.<p>ಒಂದು ತಿಂಗಳ ಗಡುವು: ‘ಒಂದು ತಿಂಗಳೊಳಗೆ ಜಿಲ್ಲಾಡಳಿತ ಸಮಾಧಿ ಸ್ಥಳವನ್ನು ಸುಂದರ ಸ್ಮಾರಕವಾಗಿ ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಕನ್ನಡಪರ, ರೈತಪರ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ ಮಾತನಾಡಿ, ಹನುಮಂತಯ್ಯ ಅನೇಕ ಜನಪರ ಕಾರ್ಯಗಳನ್ನು ಮಾಡಿದವರು. ಅವರ ಸಮಾಧಿ ನಿರ್ಲಕ್ಷ್ಯ ಖಂಡನೀಯ ಎಂದರು.</p>.<p>ಅಭಿಮಾನಿಗಳಾದ ಶ್ರೀನಿವಾಸ್, ಪ್ರಕಾಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸಮಾಧಿ ಸ್ಥಳವನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಿ ಪ್ರತಿಮೆ ನಿರ್ಮಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ ಒತ್ತಾಯಿಸಿದರು.</p>.<p>ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಸಮಾಧಿ ಸ್ಥಳದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವರ್ಷಗಳಿಂದ ಸಾರ್ವಜನಿಕರ ಒತ್ತಾಸೆ ನಿರ್ಲಕ್ಷ್ಯಿಸಿರುವ ಜಿಲ್ಲೆ ಹಾಗೂ ತಾಲ್ಲೂಕು ಆಡಳಿತದ ನಿರ್ಲಕ್ಷ್ಯ ಖಂಡನೀಯ ಎಂದು ಆರೋಪಿಸಿದರು.</p>.<p>‘ನಾಡಿನ ಅಪ್ರತಿಮ ರಾಜಕಾರಣಿ, ದೂರದೃಷ್ಟಿ ವಿಧಾನಸೌಧ ನಿರ್ಮಾತೃ ಸಮಾಧಿ ಸ್ಥಳ ಗೊತ್ತಿಲ್ಲದಂತೆ ಆಡಳಿತ ವರ್ತಿಸುತ್ತಿದೆ. ಬದುಕಿದ್ದಾಗ ಅವಮಾನ, ಮರಣ ನಂತರವೂ ಅವಮಾನ. ಕನಿಷ್ಠ ಸೌಜನ್ಯವೂ ಇಲ್ಲ’ ಎಂದು ಕಿಡಿಕಾರಿದರು.</p>.<p>ಒಂದು ತಿಂಗಳ ಗಡುವು: ‘ಒಂದು ತಿಂಗಳೊಳಗೆ ಜಿಲ್ಲಾಡಳಿತ ಸಮಾಧಿ ಸ್ಥಳವನ್ನು ಸುಂದರ ಸ್ಮಾರಕವಾಗಿ ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಕನ್ನಡಪರ, ರೈತಪರ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ ಮಾತನಾಡಿ, ಹನುಮಂತಯ್ಯ ಅನೇಕ ಜನಪರ ಕಾರ್ಯಗಳನ್ನು ಮಾಡಿದವರು. ಅವರ ಸಮಾಧಿ ನಿರ್ಲಕ್ಷ್ಯ ಖಂಡನೀಯ ಎಂದರು.</p>.<p>ಅಭಿಮಾನಿಗಳಾದ ಶ್ರೀನಿವಾಸ್, ಪ್ರಕಾಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>