<p>ಚನ್ನಪಟ್ಟಣ: ನಿವೃತ್ತ ಕನ್ನಡ ಪ್ರಾಧ್ಯಾಪಕ ದಿವಂಗತ ಅಂಕಯ್ಯ ನಾಗವಾರ ಅವರ ಸವಿನೆನಪಿಗಾಗಿ ನಗರದ ಸಾರ್ವಜನಿಕ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶುಕ್ರವಾರ ರಾಷ್ಟ್ರಕವಿ ಕುವೆಂಪು ಅವರ ಕೃತಿಗಳನ್ನು ವಿತರಿಸಲಾಯಿತು.</p>.<p>ಕುವೆಂಪು ಅವರ ಮರಿ ವಿಜ್ಞಾನಿ, ಮೋಡಣ್ಣನ ತಮ್ಮ, ನರಿಗಳಿಗೇಕೆ ಕೋಡಿಲ್ಲ, ಜಲಗಾರ (ನಾಟಕ) ಕೃತಿಗಳನ್ನು ಶಾಲಾ ಮಕ್ಕಳು ಹಾಗೂ ಶಿಕ್ಷಕರಿಗೆ ವಿತರಿಸಲಾಯಿತು.</p>.<p>ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ, ಮನುಜ ಮತ ವಿಶ್ವಪಥ, ಸರ್ವೋದಯ, ಸಮನ್ವಯ, ಮತ್ತು ಪೂರ್ಣದೃಷ್ಟಿ ವಿಚಾರಧಾರೆ ಎಲ್ಲೆಡೆ ಪಸರಿಸಬೇಕು ಎಂಬುದು ಅಂಕಯ್ಯ ನಾಗವಾರ ಅವರ ಆಶಯವಾಗಿತ್ತು. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿಯೇ ಇಂತಹ ವಿಚಾರಧಾರೆಗಳು ತಲುಪಿಸುವ ಉದ್ದೇಶದಿಂದ ಕುವೆಂಪು ಅವರ ಕೃತಿಗಳನ್ನು ಮಕ್ಕಳಿಗೆ ವಿತರಣೆ ಮಾಡಿದ್ದೇವೆ ಎಂದು ಅಂಕಯ್ಯ ನಾಗವಾರ ಅವರ ಪುತ್ರ ಅಭಿನಂದನ್ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಯಿತು. ಈ ವೇಳೆ ವಿದ್ಯಾಸಂಸ್ಥೆಯ ನಿರ್ದೇಶಕ ಶಂಭೂಗೌಡ ನಾಗವಾರ, ರಂಗ ಕಲಾವಿದ ಉಮೇಶ್, ಲೇಖಕ ಅಭಿಗೌಡ, ಪತ್ರಕರ್ತ ಗೋ.ರಾ.ಶ್ರೀನಿವಾಸ್, ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ನಿವೃತ್ತ ಕನ್ನಡ ಪ್ರಾಧ್ಯಾಪಕ ದಿವಂಗತ ಅಂಕಯ್ಯ ನಾಗವಾರ ಅವರ ಸವಿನೆನಪಿಗಾಗಿ ನಗರದ ಸಾರ್ವಜನಿಕ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶುಕ್ರವಾರ ರಾಷ್ಟ್ರಕವಿ ಕುವೆಂಪು ಅವರ ಕೃತಿಗಳನ್ನು ವಿತರಿಸಲಾಯಿತು.</p>.<p>ಕುವೆಂಪು ಅವರ ಮರಿ ವಿಜ್ಞಾನಿ, ಮೋಡಣ್ಣನ ತಮ್ಮ, ನರಿಗಳಿಗೇಕೆ ಕೋಡಿಲ್ಲ, ಜಲಗಾರ (ನಾಟಕ) ಕೃತಿಗಳನ್ನು ಶಾಲಾ ಮಕ್ಕಳು ಹಾಗೂ ಶಿಕ್ಷಕರಿಗೆ ವಿತರಿಸಲಾಯಿತು.</p>.<p>ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ, ಮನುಜ ಮತ ವಿಶ್ವಪಥ, ಸರ್ವೋದಯ, ಸಮನ್ವಯ, ಮತ್ತು ಪೂರ್ಣದೃಷ್ಟಿ ವಿಚಾರಧಾರೆ ಎಲ್ಲೆಡೆ ಪಸರಿಸಬೇಕು ಎಂಬುದು ಅಂಕಯ್ಯ ನಾಗವಾರ ಅವರ ಆಶಯವಾಗಿತ್ತು. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿಯೇ ಇಂತಹ ವಿಚಾರಧಾರೆಗಳು ತಲುಪಿಸುವ ಉದ್ದೇಶದಿಂದ ಕುವೆಂಪು ಅವರ ಕೃತಿಗಳನ್ನು ಮಕ್ಕಳಿಗೆ ವಿತರಣೆ ಮಾಡಿದ್ದೇವೆ ಎಂದು ಅಂಕಯ್ಯ ನಾಗವಾರ ಅವರ ಪುತ್ರ ಅಭಿನಂದನ್ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಯಿತು. ಈ ವೇಳೆ ವಿದ್ಯಾಸಂಸ್ಥೆಯ ನಿರ್ದೇಶಕ ಶಂಭೂಗೌಡ ನಾಗವಾರ, ರಂಗ ಕಲಾವಿದ ಉಮೇಶ್, ಲೇಖಕ ಅಭಿಗೌಡ, ಪತ್ರಕರ್ತ ಗೋ.ರಾ.ಶ್ರೀನಿವಾಸ್, ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>