ಐಎಎಸ್ ಅಧಿಕಾರಿಯೊಬ್ಬರು ಬಂದಿದ್ದಾರೆ ಎಂಬ ವಿಷಯ ತಿಳಿದು ತಹಶೀಲ್ದಾರ್ ಸುದರ್ಶನ್ ಅವರು, ಪ್ರವಾಸಿ ಮಂದಿರಕ್ಕೆ ಬಂದ ಅವರನ್ನು ಭೇಟಿ ಮಾಡಿದ್ದಾರೆ. ಅವರ ಜೊತೆ ಮಾತನಾಡುತ್ತಿದ್ದ ವೇಳೆ ಸುದರ್ಶನ್ ತಮ್ಮ ಇಲಾಖೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆಗ ಆತ ಮಾಹಿತಿ ಹೇಳಲು ತಡವರಿಸಿದ್ದನ್ನು ನೋಡಿ ಅನುಮಾನಗೊಂಡಿದ್ದಾರೆ. ಆತ ಅಂಗರಕ್ಷಕರ ಜೊತೆ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದನ್ನು ಗಮನಿಸಿದ ತಹಶೀಲ್ದಾರ್ ಅವರು ಆತನನ್ನು ಹಿಡಿದು ಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.