<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕೋಡಂಬಹಳ್ಳಿಯಲ್ಲಿ ರಾಜ್ಯ ರೈತಸಂಘದ ಕೋಡಂಬಹಳ್ಳಿ ಶಾಖೆ ಪದಾಧಿಕಾರಿಗಳು ಶುಕ್ರವಾರ ರೈತನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಜನ್ಮದಿನಾಚರಣೆ ಆಚರಿಸಿದರು.<br>ರೈತ ಸಂಕುಲದ ಪ್ರಗತಿ, ರೈತರ ಸಮಸ್ಯೆಗಳಿಗೆ ನಂಜುಂಡಸ್ವಾಮಿ ನೀಡಿದ ಕೊಡುಗೆ ಗುಣಗಾನ ನಡೆಯಿತು.</p>.<p>ನಂತರ ಗ್ರಾಮದಲ್ಲಿರುವ ಬೆಸ್ಕಾಂ ಕಚೇರಿಗೆ ತಲುಪಿ ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದನ್ನು ಶೀಘ್ರ ಸರಿಪಡಿಸಬೇಕು ಎಂದು ಒತ್ತಾಯಿಸಿ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಕೋಡಂಬಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹಲವು ದಿನಗಳ ಹಿಂದೆ ಕೆಟ್ಟು ನಿಂತಿರುವ ವಿದ್ಯುತ್ ಪರಿವರ್ತಕ ಶೀಘ್ರ ಬದಲಾವಣೆ ಮಾಡಬೇಕು. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಇರುವ ಕಾರಣ ಕೃಷಿ ವಿದ್ಯುತ್ ಅನ್ನು ರಾತ್ರಿ ವೇಳೆ ನೀಡುವ ಬದಲು ಹಗಲು ಹೊತ್ತಿನಲ್ಲಿ ನೀಡಿದರೆ ರೈತರಿಗೆ ಅನುಕೂಲವಾಗುತ್ತದೆ. ಜತೆಗೆ ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಸೂಕ್ತವಾಗಿ ಮಾಡುತ್ತಿಲ್ಲ. ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಈ ಸಮಸ್ಯೆ ಶೀಘ್ರ ಪರಿಹರಿಸಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.</p>.<p>ಮನವಿಪತ್ರ ಸ್ವೀಕರಿಸಿದ ಬೆಸ್ಕಾಂ ಎಇಇ ಶಿವರಾಜ ಹೆಗ್ಗಡೆ, ಈ ಬಗ್ಗೆ ಶೀಘ್ರವೇ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂಘದ ಪದಾಧಿಕಾರಿಗಳಾದ ರಾಮೇಗೌಡ, ಶಂಕರೇಗೌಡ, ಗೋಪಾಲ, ಈರಣ್ಣ ಯಲಿಯೂರು, ತಮ್ಮಯ್ಯಣ್ಣ ಕೊಂಡಾಪುರ, ರಾಜಣ್ಣ, ರವಿ, ಸ್ವಾಮಿ, ಪುಟ್ಟಸ್ವಾಮಿ, ಸ್ವಾಮಿ ನುಣ್ಣೂರು, ಶೇಖರ್, ನರಸಿಂಹ, ಮಾದೇವ, ಚಿಕ್ಕವೆಂಕಟಣ್ಣ, ಗೋವಿಂದಪ್ಪ, ಬಸವರಾಜು, ಸಿದ್ದೇಗೌಡ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕೋಡಂಬಹಳ್ಳಿಯಲ್ಲಿ ರಾಜ್ಯ ರೈತಸಂಘದ ಕೋಡಂಬಹಳ್ಳಿ ಶಾಖೆ ಪದಾಧಿಕಾರಿಗಳು ಶುಕ್ರವಾರ ರೈತನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಜನ್ಮದಿನಾಚರಣೆ ಆಚರಿಸಿದರು.<br>ರೈತ ಸಂಕುಲದ ಪ್ರಗತಿ, ರೈತರ ಸಮಸ್ಯೆಗಳಿಗೆ ನಂಜುಂಡಸ್ವಾಮಿ ನೀಡಿದ ಕೊಡುಗೆ ಗುಣಗಾನ ನಡೆಯಿತು.</p>.<p>ನಂತರ ಗ್ರಾಮದಲ್ಲಿರುವ ಬೆಸ್ಕಾಂ ಕಚೇರಿಗೆ ತಲುಪಿ ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದನ್ನು ಶೀಘ್ರ ಸರಿಪಡಿಸಬೇಕು ಎಂದು ಒತ್ತಾಯಿಸಿ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಕೋಡಂಬಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹಲವು ದಿನಗಳ ಹಿಂದೆ ಕೆಟ್ಟು ನಿಂತಿರುವ ವಿದ್ಯುತ್ ಪರಿವರ್ತಕ ಶೀಘ್ರ ಬದಲಾವಣೆ ಮಾಡಬೇಕು. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಇರುವ ಕಾರಣ ಕೃಷಿ ವಿದ್ಯುತ್ ಅನ್ನು ರಾತ್ರಿ ವೇಳೆ ನೀಡುವ ಬದಲು ಹಗಲು ಹೊತ್ತಿನಲ್ಲಿ ನೀಡಿದರೆ ರೈತರಿಗೆ ಅನುಕೂಲವಾಗುತ್ತದೆ. ಜತೆಗೆ ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಸೂಕ್ತವಾಗಿ ಮಾಡುತ್ತಿಲ್ಲ. ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಈ ಸಮಸ್ಯೆ ಶೀಘ್ರ ಪರಿಹರಿಸಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.</p>.<p>ಮನವಿಪತ್ರ ಸ್ವೀಕರಿಸಿದ ಬೆಸ್ಕಾಂ ಎಇಇ ಶಿವರಾಜ ಹೆಗ್ಗಡೆ, ಈ ಬಗ್ಗೆ ಶೀಘ್ರವೇ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂಘದ ಪದಾಧಿಕಾರಿಗಳಾದ ರಾಮೇಗೌಡ, ಶಂಕರೇಗೌಡ, ಗೋಪಾಲ, ಈರಣ್ಣ ಯಲಿಯೂರು, ತಮ್ಮಯ್ಯಣ್ಣ ಕೊಂಡಾಪುರ, ರಾಜಣ್ಣ, ರವಿ, ಸ್ವಾಮಿ, ಪುಟ್ಟಸ್ವಾಮಿ, ಸ್ವಾಮಿ ನುಣ್ಣೂರು, ಶೇಖರ್, ನರಸಿಂಹ, ಮಾದೇವ, ಚಿಕ್ಕವೆಂಕಟಣ್ಣ, ಗೋವಿಂದಪ್ಪ, ಬಸವರಾಜು, ಸಿದ್ದೇಗೌಡ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>