<p><strong>ಚನ್ನಪಟ್ಟಣ: </strong>‘ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಆಂಗ್ಲಭಾಷೆ ಬಳಸುವ ಬದಲು ಕನ್ನಡ ಭಾಷೆ ಬಳಸುವ ಮೂಲಕ ಕನ್ನಡವನ್ನು ಪ್ರಭಾವಯುತವಾಗಿ ಬೆಳೆಸಬೇಕು’ ಎಂದು ಹಿರಿಯ ಸಾಹಿತಿ ಮತ್ತೀಕೆರೆ ಚಲುವರಾಜು ಹೇಳಿದರು.</p>.<p>ತಾಲ್ಲೂಕಿನ ನಾಗವಾರ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಲೇಖಕರ ವೇದಿಕೆ, ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ಟ್ರಸ್ಟ್, ಸಿಂಗರಾಜಪುರ, ನಾಗವಾರ ಸಾರ್ವಜನಿಕ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ, ಉಪನ್ಯಾಸ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಾರ್ವಜನಿಕ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಉಪಾಧ್ಯಕ್ಷ ಕೆಂಚೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ.ಗಿರಿಯಪ್ಪ ಮಾತನಾಡಿದರು. ಅವರ ‘ಜರ್ಮನಿಯಲ್ಲಿ ಬೆಂಗೆನ್’ ಕೃತಿಯನ್ನು ಬಿಡುಗಡೆ ಮಾಡಲಾಯಿತು.</p>.<p>ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಶಂಭೂಗೌಡ ನಾಗವಾರ, ಕಾರ್ಯದರ್ಶಿ ಆದರ್ಶಕುಮಾರ್, ಸಾರ್ವಜನಿಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎನ್.ಬಿ.ಇಂದ್ರಕುಮಾರ್, ನಾಗವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರಾಮಚಂದ್ರಪ್ಪ, ಹಿರಿಯ ಸಾಹಿತಿ ಎಲೆಕೇರಿ ಶಿವರಾಂ, ಪ್ರೌಢಶಾಲೆಯ ಮುಖ್ಯಶಿಕ್ಷಕ ಜಯರಾಮು ಭಾಗವಹಿಸಿದ್ದರು.</p>.<p>ಇದೇ ವೇಳೆ ನಡೆದ ಯುವ ಕವಿಗೋಷ್ಠಿಯಲ್ಲಿ ಹೊನ್ನಶ್ರೀ, ಎನ್.ಎಸ್.ಸೃಜನ, ನಮಿತಾ, ಸಿ.ಆರ್.ವೇದ, ಸಿಂಚನ, ಮೇಘನ, ಚಂದ್ರಿಕಾ, ರಕ್ಷಿತಾ ಸ್ವರಚಿತ ಕವನ ವಾಚನ ಮಾಡಿದರು. ಗಾಯಕ ಬೇವೂರು ರಾಮಯ್ಯ ಗೀತಗಾಯನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>‘ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಆಂಗ್ಲಭಾಷೆ ಬಳಸುವ ಬದಲು ಕನ್ನಡ ಭಾಷೆ ಬಳಸುವ ಮೂಲಕ ಕನ್ನಡವನ್ನು ಪ್ರಭಾವಯುತವಾಗಿ ಬೆಳೆಸಬೇಕು’ ಎಂದು ಹಿರಿಯ ಸಾಹಿತಿ ಮತ್ತೀಕೆರೆ ಚಲುವರಾಜು ಹೇಳಿದರು.</p>.<p>ತಾಲ್ಲೂಕಿನ ನಾಗವಾರ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಲೇಖಕರ ವೇದಿಕೆ, ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ಟ್ರಸ್ಟ್, ಸಿಂಗರಾಜಪುರ, ನಾಗವಾರ ಸಾರ್ವಜನಿಕ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ, ಉಪನ್ಯಾಸ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಾರ್ವಜನಿಕ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಉಪಾಧ್ಯಕ್ಷ ಕೆಂಚೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ.ಗಿರಿಯಪ್ಪ ಮಾತನಾಡಿದರು. ಅವರ ‘ಜರ್ಮನಿಯಲ್ಲಿ ಬೆಂಗೆನ್’ ಕೃತಿಯನ್ನು ಬಿಡುಗಡೆ ಮಾಡಲಾಯಿತು.</p>.<p>ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಶಂಭೂಗೌಡ ನಾಗವಾರ, ಕಾರ್ಯದರ್ಶಿ ಆದರ್ಶಕುಮಾರ್, ಸಾರ್ವಜನಿಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎನ್.ಬಿ.ಇಂದ್ರಕುಮಾರ್, ನಾಗವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರಾಮಚಂದ್ರಪ್ಪ, ಹಿರಿಯ ಸಾಹಿತಿ ಎಲೆಕೇರಿ ಶಿವರಾಂ, ಪ್ರೌಢಶಾಲೆಯ ಮುಖ್ಯಶಿಕ್ಷಕ ಜಯರಾಮು ಭಾಗವಹಿಸಿದ್ದರು.</p>.<p>ಇದೇ ವೇಳೆ ನಡೆದ ಯುವ ಕವಿಗೋಷ್ಠಿಯಲ್ಲಿ ಹೊನ್ನಶ್ರೀ, ಎನ್.ಎಸ್.ಸೃಜನ, ನಮಿತಾ, ಸಿ.ಆರ್.ವೇದ, ಸಿಂಚನ, ಮೇಘನ, ಚಂದ್ರಿಕಾ, ರಕ್ಷಿತಾ ಸ್ವರಚಿತ ಕವನ ವಾಚನ ಮಾಡಿದರು. ಗಾಯಕ ಬೇವೂರು ರಾಮಯ್ಯ ಗೀತಗಾಯನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>