ಕಾಂಗ್ರೆಸ್ ಸದಸ್ಯರಿಗೆ ವಿಪ್ ಕಾಂಗ್ರೆಸ್ನಿಂದ ಗೆದ್ದಿರುವ ಹಾಗೂ ಕಾಂಗ್ರೆಸ್ಗೆ ಸೇರಿರುವ ಎಲ್ಲ ಸದಸ್ಯರಿಗೆ ವಿಪ್ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರ್ ತಿಳಿಸಿದ್ದಾರೆ. ಕಾಂಗ್ರೆಸ್ಗೆ ಬಹುಮತ ಇದ್ದು, ಪಕ್ಷ ನಗರಸಭೆ ಗದ್ದುಗೆ ಪಡೆಯುವುದರಲ್ಲಿ ಸಂಶಯವಿಲ್ಲ. ಆದರೂ, ಪಕ್ಷದ ಅಧ್ಯಕ್ಷನಾಗಿ ವಿಪ್ ನೀಡುವುದು ಕರ್ತವ್ಯವಾದ ಹಿನ್ನೆಲೆಯಲ್ಲಿ ವಿಪ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.