ಚನ್ನಪಟ್ಟಣ: ನರೇಗಾ ಯೋಜನೆಯ ರಾಜ್ಯ ಪರಿಶೀಲನಾ ತಂಡ, ತಾಲ್ಲೂಕಿನ ಕೋಡಂಬಹಳ್ಳಿ ಗ್ರಾಮಕ್ಕೆ ಬುಧವಾರ ಆಗಮಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ನಡೆದಿರುವ ಕಾಮಗಾರಿಗಳ ಪರಿಶೀಲನೆ ನಡೆಸಿತು.
ನರೇಗಾ ಯೋಜನೆಯ ಮುಖ್ಯ ಕಾರ್ಯಾಚರಣೆ ಅಧಿಕಾರಿ ಎಚ್.ಎಸ್. ಕೀರ್ತನಾ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಶ್ರೀಶೈಲ ದಿಡ್ಡಿಮನಿ ಅವರ ನೇತೃತ್ವದಲ್ಲಿ ಆಗಮಿಸಿದ ತಂಡ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿತು. ನಂತರ ಗ್ರಾ.ಪಂ. ಕಚೇರಿಯಲ್ಲಿ ಯೋಜನೆಗಳ ಕಡತಗಳ ಪರಿಶೀಲನೆ ನಡೆಸಿದರು.
ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಮಂಜನಾಥ್, ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಸ್ವಪ್ನಾ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪಿ.ಕೆ. ಮನು, ತಾ.ಪಂ. ಸಹಾಯಕ ನಿರ್ದೇಶಕ ಸಿದ್ದರಾಜು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾ.ಪಂ. ಸಿಬ್ಬಂದಿ, ನರೇಗಾ ಸಿಬ್ಬಂದಿ ಹಾಜರಿದ್ದರು.