<p><strong>ಚನ್ನಪಟ್ಟಣ</strong>: ಇಲ್ಲಿನ ಬಡಾಮಕಾನ್ ದರ್ಗಾದಲ್ಲಿ ಹಜರತ್ ಸೈಯದ್ ಮಹಮ್ಮದ್ ಅಖಿಲ್ ಷಾ ಖಾದ್ರಿ ಅವರ ಗಂಧ ಮಹೋತ್ಸವ ಕೊನೆ ದಿನವಾದ ಶುಕ್ರವಾರ ರಾತ್ರಿ ನಡೆದ ಕವ್ವಾಲಿ ಕಾರ್ಯಕ್ರಮದಲ್ಲಿ ಆಯೋಜಕರು ಪಟ್ಟಣದ ಮೂವರು ಪೊಲೀಸರಿಗೆ ಸನ್ಮಾನಿಸಿ ಅವರ ಮೇಲೆ ನೋಟುಗಳನ್ನು ಎರಚಿದ್ದಾರೆ.</p>.<p>ಚನ್ನಪಟ್ಟಣ ಟೌನ್ ಠಾಣೆ ಪಿಎಸ್ಐ ಹರೀಶ್ ಸಿ.ಎಂ, ಎಎಸ್ಐ ಫೈರೋಜ್ ಹಾಗೂ ಪೂರ್ವ ಠಾಣೆಯ ದುರ್ಗಪ್ಪ ನೋಟಿನ ಸನ್ಮಾನ ಸ್ವೀಕರಿಸಿದವರು. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ ಗೌಡ ಅವರು ಮೂವರಿಗೂ ಷೋಕಾಸ್ ನೋಟಿಸ್ ನೀಡಿದ್ದಾರೆ.</p>.<p>ನಾಲ್ಕು ದಿನಗಳ ಗಂಧ ಮಹೋತ್ಸವದ ಕಡೆ ದಿನದ ರಾತ್ರಿ ಕವ್ವಾಲಿ ಕಾರ್ಯಕ್ರಮವಿತ್ತು. ಅದು ಮುಗಿದ ಬಳಿಕ ಮಹೋತ್ಸವಕ್ಕೆ ಶ್ರಮಿಸಿದವರಿಗೆ ಆಯೋಜಕರು ವೇದಿಕೆಗೆ ಕರೆದು ಸನ್ಮಾನಿ<br>ಸುತ್ತಿದ್ದರು. ಅದರಂತೆ, ಮಹೋತ್ಸವಕ್ಕೆ ಪೊಲೀಸ್ ಬಂದೋಬಸ್ತ್ ಒದಗಿಸಿದ ಕಾರಣಕ್ಕೆ ಮೂವರೂ ಅಧಿಕಾರಿಗಳನ್ನು ವೇದಿಕೆಗೆ ಕರೆದರು. ಪೊಲೀಸ್ ಸಮವಸ್ತ್ರ ದಲ್ಲಿದ್ದ ಮೂವರಿಗೂ ದೊಡ್ಡ ಹೂವಿನ<br>ಹಾರ, ಟ್ರೋಫಿ ನೀಡಿ ಸನ್ಮಾನಿಸಿದರು. ಬಳಿಕ, ₹20ರ ನೋಟುಗಳನ್ನು ಮೂವರ ಮೇಲೂ ಎರಚಿದರು. ಪೊಲೀಸರ ಮೈ ಮೇಲೆ ಎರಚುತ್ತಿದ್ದ ನೋಟುಗಳು ಕೆಳಕ್ಕೆ ಬೀಳುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದವರು ನಾ ಮುಂದು ತಾ ಮುಂದೆ ಎಂದು ಎತ್ತಿಕೊಂಡರು. </p>.<p><strong>ಷೋಕಾಸ್ ನೋಟಿಸ್ ಜಾರಿ</strong>: ‘ಎಸ್ಪಿ ಗಂಧ ಮಹೋತ್ಸವ ಕಡೆ ದಿನ ಸನ್ಮಾನಿಸಿ ಹಣ ಎರಚಿರುವುದು ತಪ್ಪು. ಷೋಕಾಸ್ ನೋಟಿಸ್ ನೀಡಲಾಗಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ ಗೌಡ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಇಲ್ಲಿನ ಬಡಾಮಕಾನ್ ದರ್ಗಾದಲ್ಲಿ ಹಜರತ್ ಸೈಯದ್ ಮಹಮ್ಮದ್ ಅಖಿಲ್ ಷಾ ಖಾದ್ರಿ ಅವರ ಗಂಧ ಮಹೋತ್ಸವ ಕೊನೆ ದಿನವಾದ ಶುಕ್ರವಾರ ರಾತ್ರಿ ನಡೆದ ಕವ್ವಾಲಿ ಕಾರ್ಯಕ್ರಮದಲ್ಲಿ ಆಯೋಜಕರು ಪಟ್ಟಣದ ಮೂವರು ಪೊಲೀಸರಿಗೆ ಸನ್ಮಾನಿಸಿ ಅವರ ಮೇಲೆ ನೋಟುಗಳನ್ನು ಎರಚಿದ್ದಾರೆ.</p>.<p>ಚನ್ನಪಟ್ಟಣ ಟೌನ್ ಠಾಣೆ ಪಿಎಸ್ಐ ಹರೀಶ್ ಸಿ.ಎಂ, ಎಎಸ್ಐ ಫೈರೋಜ್ ಹಾಗೂ ಪೂರ್ವ ಠಾಣೆಯ ದುರ್ಗಪ್ಪ ನೋಟಿನ ಸನ್ಮಾನ ಸ್ವೀಕರಿಸಿದವರು. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ ಗೌಡ ಅವರು ಮೂವರಿಗೂ ಷೋಕಾಸ್ ನೋಟಿಸ್ ನೀಡಿದ್ದಾರೆ.</p>.<p>ನಾಲ್ಕು ದಿನಗಳ ಗಂಧ ಮಹೋತ್ಸವದ ಕಡೆ ದಿನದ ರಾತ್ರಿ ಕವ್ವಾಲಿ ಕಾರ್ಯಕ್ರಮವಿತ್ತು. ಅದು ಮುಗಿದ ಬಳಿಕ ಮಹೋತ್ಸವಕ್ಕೆ ಶ್ರಮಿಸಿದವರಿಗೆ ಆಯೋಜಕರು ವೇದಿಕೆಗೆ ಕರೆದು ಸನ್ಮಾನಿ<br>ಸುತ್ತಿದ್ದರು. ಅದರಂತೆ, ಮಹೋತ್ಸವಕ್ಕೆ ಪೊಲೀಸ್ ಬಂದೋಬಸ್ತ್ ಒದಗಿಸಿದ ಕಾರಣಕ್ಕೆ ಮೂವರೂ ಅಧಿಕಾರಿಗಳನ್ನು ವೇದಿಕೆಗೆ ಕರೆದರು. ಪೊಲೀಸ್ ಸಮವಸ್ತ್ರ ದಲ್ಲಿದ್ದ ಮೂವರಿಗೂ ದೊಡ್ಡ ಹೂವಿನ<br>ಹಾರ, ಟ್ರೋಫಿ ನೀಡಿ ಸನ್ಮಾನಿಸಿದರು. ಬಳಿಕ, ₹20ರ ನೋಟುಗಳನ್ನು ಮೂವರ ಮೇಲೂ ಎರಚಿದರು. ಪೊಲೀಸರ ಮೈ ಮೇಲೆ ಎರಚುತ್ತಿದ್ದ ನೋಟುಗಳು ಕೆಳಕ್ಕೆ ಬೀಳುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದವರು ನಾ ಮುಂದು ತಾ ಮುಂದೆ ಎಂದು ಎತ್ತಿಕೊಂಡರು. </p>.<p><strong>ಷೋಕಾಸ್ ನೋಟಿಸ್ ಜಾರಿ</strong>: ‘ಎಸ್ಪಿ ಗಂಧ ಮಹೋತ್ಸವ ಕಡೆ ದಿನ ಸನ್ಮಾನಿಸಿ ಹಣ ಎರಚಿರುವುದು ತಪ್ಪು. ಷೋಕಾಸ್ ನೋಟಿಸ್ ನೀಡಲಾಗಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ ಗೌಡ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>