ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನ‍ಪಟ್ಟಣ ಆರ್‌ಎಫ್‌ಒ ಧನ್ಯಶ್ರೀ ನಾಪತ್ತೆ

Last Updated 23 ಫೆಬ್ರುವರಿ 2022, 19:18 IST
ಅಕ್ಷರ ಗಾತ್ರ

ರಾಮನಗರ: ಸಾಮಾಜಿಕ ಅರಣ್ಯ ಇಲಾಖೆಯ ಚನ್ನಪಟ್ಟಣ ವಲಯ ಅರಣ್ಯಾಧಿಕಾರಿ ಧನ್ಯಶ್ರೀ (31) ನಾಪತ್ತೆ ಆಗಿದ್ದು, ಈ ಸಂಬಂಧ ಅವರ ಸಹೋದರಿ ಚನ್ನಪಟ್ಟಣ ಟೌನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದೇ 21ರಂದು ಬೆಳಿಗ್ಗೆ 10ಕ್ಕೆ ಎಂದಿನಂತೆ ಮನೆಯಿಂದ ಸರ್ಕಾರಿ ವಾಹನದಲ್ಲಿ ಕಚೇರಿಗೆ ತೆರಳಿದ್ದ ಧನ್ಯಶ್ರೀ ಮರಳಿ ಮನೆಗೆ ಬಂದಿಲ್ಲ. ಅವರ ಮೊಬೈಲ್‌ ಸ್ವಿಚ್‌ ಆಫ್ ಆಗಿದ್ದು, ಬಂಧುಗಳು– ಸ್ನೇಹಿತರ ಸಂಪರ್ಕಕ್ಕೆ ಸಿಗುತ್ತಿಲ್ಲ.ಚನ್ನಪಟ್ಟಣ ತಾಲ್ಲೂಕಿನವರೇ ಆದ ಧನ್ಯಶ್ರೀ ಈ ಮೊದಲು ಆನೇಕಲ್‌ನಲ್ಲಿ ಸೇವೆ ಸಲ್ಲಿಸಿ, ವರ್ಷದ ಹಿಂದೆ ಚನ್ನಪಟ್ಟಣಕ್ಕೆ ವರ್ಗಾವಣೆ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT