<p><strong>ಚನ್ನಪಟ್ಟಣ</strong>: ಇಂದು ಪರಿಸರದ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯಿಂದ ಪರಿಸರ ನಾಶವಾಗುತ್ತಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಆಣಿಗೆರೆ ಕೆ.ಮಲ್ಲಯ್ಯ ಎಚ್ಚರಿಸಿದರು.</p>.<p>ತಾಲ್ಲೂಕಿನ ಸಂಕಲಗೆರೆ ಗ್ರಾಮದ ಬಳಿ ಮಂಗಳವಾರ ಪರಿಸರ ಪ್ರೇಮಿ ಶಂಕರಪ್ಪ ಅವರು ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಪರಿಸರ ಉಳಿಸಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪ್ರತಿಯೊಬ್ಬರಲ್ಲೂ ಪರಿಸರ ಕಾಳಜಿ ಸ್ವಯಂಪ್ರೇರಿತವಾಗಿ ಬರಬೇಕು. ಎಲ್ಲರೂ ಪರಿಸರ ಉಳಿಸುವ ಕಾಯಕಕ್ಕೆ ಕೈಜೋಡಿಸಬೇಕು. ಮರಗಿಡಗಳನ್ನು ಬೆಳೆಸುವುದರ ಜೊತೆಗೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರು, ಗಾಳಿಯನ್ನು ಶುದ್ಧವಾಗಿಡಲು ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಸಂಕಲಗೆರೆ ಮತ್ತೀಕೆರೆ ರಸ್ತೆಯಲ್ಲಿ ಗಿಡ ನೆಡುವ ಜೊತೆಗೆ ರೈತರಿಗೆ 80ಕ್ಕೂ ಹೆಚ್ಚು ತೆಂಗು ಮತ್ತು 100 ಅಡಿಕೆ ಸಸಿಗಳನ್ನು ವಿತರಿಸಲಾಯಿತು.</p>.<p>ಪರಿಸರ ಪ್ರೇಮಿ ಶಂಕರಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಕೃಷ್ಣಯ್ಯ, ಪದಾಧಿಕಾರಗಳಾದ ತಿಮ್ಮೇಗೌಡ, ಮರೀಗೌಡ, ಅಬ್ಬೂರು ವಿಜಯ್ ಕುಮಾರ್, ನೀಲಸಂದ್ರ ಸಿದ್ದರಾಮು, ಚಕ್ಕಲೂರು ಚೌಡಯ್ಯ, ವಸಂತಕುಮಾರ್, ಸರ್ವೋತ್ತಮ, ಸುರೇಶ್, ಯಲಿಯೂರು ಈರಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಇಂದು ಪರಿಸರದ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯಿಂದ ಪರಿಸರ ನಾಶವಾಗುತ್ತಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಆಣಿಗೆರೆ ಕೆ.ಮಲ್ಲಯ್ಯ ಎಚ್ಚರಿಸಿದರು.</p>.<p>ತಾಲ್ಲೂಕಿನ ಸಂಕಲಗೆರೆ ಗ್ರಾಮದ ಬಳಿ ಮಂಗಳವಾರ ಪರಿಸರ ಪ್ರೇಮಿ ಶಂಕರಪ್ಪ ಅವರು ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಪರಿಸರ ಉಳಿಸಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪ್ರತಿಯೊಬ್ಬರಲ್ಲೂ ಪರಿಸರ ಕಾಳಜಿ ಸ್ವಯಂಪ್ರೇರಿತವಾಗಿ ಬರಬೇಕು. ಎಲ್ಲರೂ ಪರಿಸರ ಉಳಿಸುವ ಕಾಯಕಕ್ಕೆ ಕೈಜೋಡಿಸಬೇಕು. ಮರಗಿಡಗಳನ್ನು ಬೆಳೆಸುವುದರ ಜೊತೆಗೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರು, ಗಾಳಿಯನ್ನು ಶುದ್ಧವಾಗಿಡಲು ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಸಂಕಲಗೆರೆ ಮತ್ತೀಕೆರೆ ರಸ್ತೆಯಲ್ಲಿ ಗಿಡ ನೆಡುವ ಜೊತೆಗೆ ರೈತರಿಗೆ 80ಕ್ಕೂ ಹೆಚ್ಚು ತೆಂಗು ಮತ್ತು 100 ಅಡಿಕೆ ಸಸಿಗಳನ್ನು ವಿತರಿಸಲಾಯಿತು.</p>.<p>ಪರಿಸರ ಪ್ರೇಮಿ ಶಂಕರಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಕೃಷ್ಣಯ್ಯ, ಪದಾಧಿಕಾರಗಳಾದ ತಿಮ್ಮೇಗೌಡ, ಮರೀಗೌಡ, ಅಬ್ಬೂರು ವಿಜಯ್ ಕುಮಾರ್, ನೀಲಸಂದ್ರ ಸಿದ್ದರಾಮು, ಚಕ್ಕಲೂರು ಚೌಡಯ್ಯ, ವಸಂತಕುಮಾರ್, ಸರ್ವೋತ್ತಮ, ಸುರೇಶ್, ಯಲಿಯೂರು ಈರಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>