<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಹಾಗೂ ಕನ್ನಿದೊಡ್ಡಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಕ್ರಮ ಖಂಡಿಸಿ ಗ್ರಾಮಸ್ಥರು ಹಾಗೂ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಪದಾಧಿಕಾರಿಗಳು ಶನಿವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ಹೊಂಗನೂರು ಕೆಪಿಎಸ್ ಮ್ಯಾಗ್ನೇಟ್ ಶಾಲೆಗೆ ವಿಲೀನ ಮಾಡುವ ಹೆಸರಿನಲ್ಲಿ ಈ ಎರಡೂ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ಖಂಡನೀಯ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಸ್ಥಳೀಯವಾಗಿ ಹಲವು ಸಮಸ್ಯೆಗಳು ಎದುರಾಗುತ್ತವೆ. ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳು, ಪೋಷಕರು ಸಂಕಷ್ಟಕ್ಕೆ ಈಡಾಗುತ್ತಾರೆ. ಸರ್ಕಾರ ಈ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಸಂಘಟನೆ ರಾಜ್ಯ ಕಾರ್ಯದರ್ಶಿ ನವಾಜ್, ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯ ವಿನಯ್ ಚಂದ್ರ, ಜಿಲ್ಲಾ ಸಂಚಾಲಕ ರೋಹಿತ್, ಹೊಡಿಕೆ ಹೊಸಹಳ್ಳಿ ಗ್ರಾಮಸ್ಥರಾದ ನಯನ್, ಶ್ರೀಕಂಠಯ್ಯ, ಸಾರಥಿ, ಗೀತಾ, ರಾಧಾ, ಕನ್ನಿದೊಡ್ಡಿ ಗ್ರಾಮಸ್ಥರಾದ ಗೋವಿಂದರಾಜು, ರಮ್ಯಾ, ದಾಸಪ್ಪ, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಹಾಗೂ ಕನ್ನಿದೊಡ್ಡಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಕ್ರಮ ಖಂಡಿಸಿ ಗ್ರಾಮಸ್ಥರು ಹಾಗೂ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಪದಾಧಿಕಾರಿಗಳು ಶನಿವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ಹೊಂಗನೂರು ಕೆಪಿಎಸ್ ಮ್ಯಾಗ್ನೇಟ್ ಶಾಲೆಗೆ ವಿಲೀನ ಮಾಡುವ ಹೆಸರಿನಲ್ಲಿ ಈ ಎರಡೂ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ಖಂಡನೀಯ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಸ್ಥಳೀಯವಾಗಿ ಹಲವು ಸಮಸ್ಯೆಗಳು ಎದುರಾಗುತ್ತವೆ. ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳು, ಪೋಷಕರು ಸಂಕಷ್ಟಕ್ಕೆ ಈಡಾಗುತ್ತಾರೆ. ಸರ್ಕಾರ ಈ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಸಂಘಟನೆ ರಾಜ್ಯ ಕಾರ್ಯದರ್ಶಿ ನವಾಜ್, ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯ ವಿನಯ್ ಚಂದ್ರ, ಜಿಲ್ಲಾ ಸಂಚಾಲಕ ರೋಹಿತ್, ಹೊಡಿಕೆ ಹೊಸಹಳ್ಳಿ ಗ್ರಾಮಸ್ಥರಾದ ನಯನ್, ಶ್ರೀಕಂಠಯ್ಯ, ಸಾರಥಿ, ಗೀತಾ, ರಾಧಾ, ಕನ್ನಿದೊಡ್ಡಿ ಗ್ರಾಮಸ್ಥರಾದ ಗೋವಿಂದರಾಜು, ರಮ್ಯಾ, ದಾಸಪ್ಪ, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>