<p><strong>ಚನ್ನಪಟ್ಟಣ:</strong> ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇವರು ಕಂಕಣಬದ್ಧರು. ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೂ ಪಣತೊಟ್ಟಿದ್ದಾರೆ. ಇವರ ಸಾಮಾಜಿಕ ಕಾಳಜಿ ಜನ ಮನ್ನಣೆಗೆ ಗಳಿಸಿದೆ.</p>.<p>ತಹಶೀಲ್ದಾರ್ ಬಿ.ಎನ್.ಗಿರೀಶ್ ಕಂದಾಯ ಇಲಾಖೆ ಭಾರಿ ಕಾರ್ಯಭಾರದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಶೇ100 ಫಲಿತಾಂಶ ತರಬೇಕೆಂಬ ಗುರಿಯೊಂದಿಗೆ ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರ ಸಭೆ, ಫಲಿತಾಂಶ ವಿಶ್ಲೇಷಣೆ, ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ ಹಮ್ಮಿಕೊಂಡಿದ್ದಾರೆ. ಸಂಜೆ ವೇಳೆ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪ್ರೋತ್ಸಾಹ ನೀಡುತ್ತಿದ್ದಾರೆ.</p>.<p>ಇದರ ಜತೆಗೆ ‘ಸರ್ಕಾರಿ ಶಾಲೆ ಉಳಿಸೋಣ, ಬೆಳೆಸೋಣ’ ಅಭಿಯಾನದಡಿ ಸ್ವತಃ ಕೈಯಲ್ಲಿ ಕುಂಚ ಹಿಡಿದು ಕಾರ್ಮಿಕರ ಜತೆ ಸೇರಿ ಶಾಲೆಗಳಿಗೆ ಸುಣ್ಣ-ಬಣ್ಣ ಬಳಿಯುವ ಕೆಲಸವೂ ಮಾಡುತ್ತಿದ್ದಾರೆ. ಭಾನುವಾರ ಸೇರಿದಂತೆ ರಜಾದಿನಗಳಲ್ಲಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಬಣ್ಣ ಬಳಿಯುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಈಗಾಗಲೇ ನಗರದ ಹಳೆ ಡೇರಾ ಶಾಲೆ ಮತ್ತು ಟಿಪ್ಪುನಗರ ಸರ್ಕಾರಿ ಪ್ರೌಢಶಾಲೆಗೆ ಬಣ್ಣ ಬಳಿಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.</p>.<p>ಶಿಕ್ಷಣ ಮತ್ತು ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ ನೀಡಿರುವ ಗಿರೀಶ್, ಸರ್ಕಾರಿ ಶಾಲೆಗಳು ಆಕರ್ಷಕವಾಗಿದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಸೆಳೆಯಬಲ್ಲವು ಎಂಬ ಪರಿಕಲ್ಪನೆಯೊಂದಿಗೆ ಕಾರ್ಯೋನ್ಮುಖರಾಗಿದ್ದಾರೆ. ಅವರ ಈ ಅಭಿಯಾನಕ್ಕೆ ದಾನಿಗಳು, ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮಾನ ಮನಸ್ಕ ಅಧಿಕಾರಿಗಳು ಕೈಜೋಡಿಸಿದ್ದಾರೆ.</p>.<p>ಈ ಹಿಂದೆ ಮತದಾರರ ಮ್ಯಾಪಿಂಗ್, ಕಂದಾಯ ಇಲಾಖೆಯ ಭೂಮಿ ರ್ಯಾಂಕಿಂಗ್ನಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟಿರುವ ಗಿರೀಶ್, ಶಿವಮೊಗ್ಗ ಸೇರಿದಂತೆ ವಿವಿಧೆಡೆ ಕೆಲಸ ಮಾಡಿ ಸರ್ಕಾರದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಭಾಜನರು.</p>.<h2>‘ಸರ್ಕಾರದ ಅಧಿಕಾರ ಜನಸೇವೆಗೆ ಸಿಕ್ಕಿದೆ’</h2>.<p>‘ಸರ್ಕಾರದ ಕೆಲಸ ದೇವರ ಕೆಲಸ ಎನ್ನುವಂತೆ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಸರ್ಕಾರಿ ಶಾಲೆಗಳು ಸಮಾಜದ ಆಸ್ತಿ. ಅವುಗಳನ್ನು ಸುಸ್ಥಿತಿಯಲ್ಲಿಡುವುದು ನಮ್ಮೆಲ್ಲರ ಜವಾಬ್ದಾರಿ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ತರುವುದು ಸಹ ನನ್ನ ಕರ್ತವ್ಯ’ ಎಂದು ತಹಶೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇವರು ಕಂಕಣಬದ್ಧರು. ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೂ ಪಣತೊಟ್ಟಿದ್ದಾರೆ. ಇವರ ಸಾಮಾಜಿಕ ಕಾಳಜಿ ಜನ ಮನ್ನಣೆಗೆ ಗಳಿಸಿದೆ.</p>.<p>ತಹಶೀಲ್ದಾರ್ ಬಿ.ಎನ್.ಗಿರೀಶ್ ಕಂದಾಯ ಇಲಾಖೆ ಭಾರಿ ಕಾರ್ಯಭಾರದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಶೇ100 ಫಲಿತಾಂಶ ತರಬೇಕೆಂಬ ಗುರಿಯೊಂದಿಗೆ ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರ ಸಭೆ, ಫಲಿತಾಂಶ ವಿಶ್ಲೇಷಣೆ, ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ ಹಮ್ಮಿಕೊಂಡಿದ್ದಾರೆ. ಸಂಜೆ ವೇಳೆ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪ್ರೋತ್ಸಾಹ ನೀಡುತ್ತಿದ್ದಾರೆ.</p>.<p>ಇದರ ಜತೆಗೆ ‘ಸರ್ಕಾರಿ ಶಾಲೆ ಉಳಿಸೋಣ, ಬೆಳೆಸೋಣ’ ಅಭಿಯಾನದಡಿ ಸ್ವತಃ ಕೈಯಲ್ಲಿ ಕುಂಚ ಹಿಡಿದು ಕಾರ್ಮಿಕರ ಜತೆ ಸೇರಿ ಶಾಲೆಗಳಿಗೆ ಸುಣ್ಣ-ಬಣ್ಣ ಬಳಿಯುವ ಕೆಲಸವೂ ಮಾಡುತ್ತಿದ್ದಾರೆ. ಭಾನುವಾರ ಸೇರಿದಂತೆ ರಜಾದಿನಗಳಲ್ಲಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಬಣ್ಣ ಬಳಿಯುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಈಗಾಗಲೇ ನಗರದ ಹಳೆ ಡೇರಾ ಶಾಲೆ ಮತ್ತು ಟಿಪ್ಪುನಗರ ಸರ್ಕಾರಿ ಪ್ರೌಢಶಾಲೆಗೆ ಬಣ್ಣ ಬಳಿಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.</p>.<p>ಶಿಕ್ಷಣ ಮತ್ತು ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ ನೀಡಿರುವ ಗಿರೀಶ್, ಸರ್ಕಾರಿ ಶಾಲೆಗಳು ಆಕರ್ಷಕವಾಗಿದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಸೆಳೆಯಬಲ್ಲವು ಎಂಬ ಪರಿಕಲ್ಪನೆಯೊಂದಿಗೆ ಕಾರ್ಯೋನ್ಮುಖರಾಗಿದ್ದಾರೆ. ಅವರ ಈ ಅಭಿಯಾನಕ್ಕೆ ದಾನಿಗಳು, ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮಾನ ಮನಸ್ಕ ಅಧಿಕಾರಿಗಳು ಕೈಜೋಡಿಸಿದ್ದಾರೆ.</p>.<p>ಈ ಹಿಂದೆ ಮತದಾರರ ಮ್ಯಾಪಿಂಗ್, ಕಂದಾಯ ಇಲಾಖೆಯ ಭೂಮಿ ರ್ಯಾಂಕಿಂಗ್ನಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟಿರುವ ಗಿರೀಶ್, ಶಿವಮೊಗ್ಗ ಸೇರಿದಂತೆ ವಿವಿಧೆಡೆ ಕೆಲಸ ಮಾಡಿ ಸರ್ಕಾರದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಭಾಜನರು.</p>.<h2>‘ಸರ್ಕಾರದ ಅಧಿಕಾರ ಜನಸೇವೆಗೆ ಸಿಕ್ಕಿದೆ’</h2>.<p>‘ಸರ್ಕಾರದ ಕೆಲಸ ದೇವರ ಕೆಲಸ ಎನ್ನುವಂತೆ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಸರ್ಕಾರಿ ಶಾಲೆಗಳು ಸಮಾಜದ ಆಸ್ತಿ. ಅವುಗಳನ್ನು ಸುಸ್ಥಿತಿಯಲ್ಲಿಡುವುದು ನಮ್ಮೆಲ್ಲರ ಜವಾಬ್ದಾರಿ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ತರುವುದು ಸಹ ನನ್ನ ಕರ್ತವ್ಯ’ ಎಂದು ತಹಶೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>