<p><strong>ಚನ್ನಪಟ್ಟಣ</strong>: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಪೀಹಳ್ಳಿದೊಡ್ಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ದಾಳಿ ನಡೆಸಿ ರೈತರ ಜಮೀನಿನಲ್ಲಿ ಬೆಳೆದಿದ್ದ ತೆಂಗಿನ ಸಸಿಗಳನ್ನು ಧ್ವಂಸ ಮಾಡಿವೆ.</p><p><br> ಗ್ರಾಮದ ರೈತ ಪಿ.ಬಿ. ಭಾನುಪ್ರಸಾದ್ ಅವರ ತೆಂಗಿನತೋಟದ ಮೇಲೆ ದಾಳಿ ಮಾಡಿರುವ ಐದು ಕಾಡಾನೆಗಳ ತಂಡ ಹತ್ತಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ಉರುಳಿಸಿ ಧ್ವಂಸ ಮಾಡಿವೆ. </p><p>ನಂತರ ಪಕ್ಕದ ಜಮೀನಿನ ಸಚಿನ್ ಅವರ ತೆಂಗಿನತೋಟದ ಮೇಲೆ ದಾಳಿ ಮಾಡಿ ತೆಂಗಿನಸಸಿಗಳ ಸುಳಿಗಳನ್ನು ಕಿತ್ತು ನಾಶ ಮಾಡಿವೆ. ಘಟನೆಯಲ್ಲಿ ರೂ. 2 ಲಕ್ಷ ರೂ. ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p><p><br> ಕಾಡಾನೆ ದಾಳಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಪೀಹಳ್ಳಿದೊಡ್ಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ದಾಳಿ ನಡೆಸಿ ರೈತರ ಜಮೀನಿನಲ್ಲಿ ಬೆಳೆದಿದ್ದ ತೆಂಗಿನ ಸಸಿಗಳನ್ನು ಧ್ವಂಸ ಮಾಡಿವೆ.</p><p><br> ಗ್ರಾಮದ ರೈತ ಪಿ.ಬಿ. ಭಾನುಪ್ರಸಾದ್ ಅವರ ತೆಂಗಿನತೋಟದ ಮೇಲೆ ದಾಳಿ ಮಾಡಿರುವ ಐದು ಕಾಡಾನೆಗಳ ತಂಡ ಹತ್ತಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ಉರುಳಿಸಿ ಧ್ವಂಸ ಮಾಡಿವೆ. </p><p>ನಂತರ ಪಕ್ಕದ ಜಮೀನಿನ ಸಚಿನ್ ಅವರ ತೆಂಗಿನತೋಟದ ಮೇಲೆ ದಾಳಿ ಮಾಡಿ ತೆಂಗಿನಸಸಿಗಳ ಸುಳಿಗಳನ್ನು ಕಿತ್ತು ನಾಶ ಮಾಡಿವೆ. ಘಟನೆಯಲ್ಲಿ ರೂ. 2 ಲಕ್ಷ ರೂ. ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p><p><br> ಕಾಡಾನೆ ದಾಳಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>