ಹಳ್ಳದಲ್ಲಿ ತೆಂಗಿನಗರಿಗಳನ್ನು ಹಾಕಿ ಮುಚ್ಚಿದ್ದ ಸ್ಥಿತಿಯಲ್ಲಿದ್ದ ರಕ್ತಸಿಕ್ತವಾಗಿದ್ದ ಮೃತದೇಹವನ್ನು ಸ್ಥಳೀಯರು ಗುರುತಿಸಿ ಪೊಲೀಸರಿಗೆ ವಿಷಯ ತಿಳಿಸಿದರು. ನಂತರ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಡಿವೈಎಸ್ಪಿ ಗಿರಿ ಮತ್ತು ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹದ ಮೇಲೆ ಆಯುಧಗಳಿಂದ ಹಲ್ಲೆ ನಡೆಸಿರುವ ಗಾಯದ ಗುರುತುಗಳು ಇವೆ ಎಂದು ಪೊಲೀಸರು ತಿಳಿಸಿದ್ದಾರೆ.