ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುನೀತ್ ರಾಜ್‌ಕುಮಾರ್ ಜನ್ಮದಿನ: ಉಪಾಹಾರ ವಿತರಣೆ

ವಿತರಣೆ
Published 19 ಮಾರ್ಚ್ 2024, 5:10 IST
Last Updated 19 ಮಾರ್ಚ್ 2024, 5:10 IST
ಅಕ್ಷರ ಗಾತ್ರ

ಚನ್ನಪಟ್ಟಣ: ಪುನೀತ್ ರಾಜ್‌ಕುಮಾರ್ ಜನ್ಮದಿನದ ಅಂಗವಾಗಿ ಭಾನುವಾರ ನಗರದ ಕಾವೇರಿ ಸರ್ಕಲ್‌ನಲ್ಲಿ 500ಕ್ಕೂ ಹೆಚ್ಚು ಮಂದಿಗೆ ಉಪಾಹಾರ ವಿತರಿಸಲಾಯಿತು.

ಹೊಸೂರುದೊಡ್ಡಿ ಬೀರೇಶ್, ಖಾಸಗಿ ಪ್ರಿಂಟಿಂಗ್ ಪ್ರೆಸ್‌ವೊಂದರಲ್ಲಿ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದು, ತಾನು ದುಡಿದು ಉಳಿಸಿದ ಸ್ವಂತ ಹಣದಲ್ಲೇ 500ಮಂದಿಗೆ ಉಪಾಹಾರ ವ್ಯವಸ್ಥೆ ಮಾಡಿದ್ದರು.

ನಿವೃತ್ತ ಪ್ರಾಂಶುಪಾಲ ನಿಂಗೇಗೌಡ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ, ಮುಖಂಡ ಆಣಿಗೆರೆ ಸಿದ್ದರಾಜು, ಕಿರುತೆರೆ ನಟ ರ್‍ಯಾಂಬೊ ಸೂರಿ, ಜಗದಾಪುರ ಕೃಷ್ಣೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT