<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಕುಕ್ಕೂರಿನಲ್ಲಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೃದ್ಧೆಯ ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಇಲ್ಲಿನ ಗ್ರಾಮಾಂತರ ಪೊಲೀಸರು, ಬಂಧಿತರಿಂದ ಸುಮಾರು ₹7.75 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ.</p>.<p>ಕನಕಪುರ ತಾಲ್ಲೂಕಿನ ಕೆಬ್ಬಳ್ಳಿಯ ಕೆ.ಸಿ. ಶಿವರಾಜು (40), ಚೀರನಕುಪ್ಪೆಯ ಮಂಜುನಾಥ (35) ಬಂಧಿತರು. ಏಪ್ರಿಲ್ 4 ರಂದು ಕುಕ್ಕೂರು ಗ್ರಾಮದ ವೃದ್ದೆ ನಿಂಗಮ್ಮ ಅವರು ತಮ್ಮ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಬೈಕ್ನಲ್ಲಿ ಬಂದಿದದ ಆರೋಪಿಗಳು ನೀರಿನ ಬಾಟೆಲ್ ಖರೀದಿಸುವ ನೆಪದಲ್ಲಿ ವೃದ್ದೆಯ ಕುತ್ತಿಗೆಯಲ್ಲಿದ್ದ 63 ಗ್ರಾಂ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದರು. ಈ ಕುರಿತು ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಸೂಕ್ತ ಮಾಹಿತಿ ಕಲೆಹಾಕಿ, ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಲಿಗೆ ಮಾಡಲಾಗಿದ್ದ ಸುಮಾರು ₹7,75 ಲಕ್ಷ ಮೌಲ್ಯದ 63 ಗ್ರಾಂ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಕೆ ಮಾಡಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.</p>.<p>ಆರೋಪಿಗಳು ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಸೇರಿ ಒಟ್ಟು ಮೂರು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ. ಪ್ರಕಾಶ್, ಸಬ್ಇನ್ ಸ್ಪೆಕ್ಟರ್ ಮನೋಹರ್, ಸಿಬ್ಬಂದಿ ಶಿವಕುಮಾರ್, ಹನುಮಂತಶೆಟ್ಟಿ, ಚೇತನ್, ಪವನ್ ಕುಮಾರ್, ಶಿವು, ನಂದೀಶ್, ಮಹದೇವ್, ಜೀಪ್ ಚಾಲಕ ಪ್ರಕಾಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-18-1062106703</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಕುಕ್ಕೂರಿನಲ್ಲಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೃದ್ಧೆಯ ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಇಲ್ಲಿನ ಗ್ರಾಮಾಂತರ ಪೊಲೀಸರು, ಬಂಧಿತರಿಂದ ಸುಮಾರು ₹7.75 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ.</p>.<p>ಕನಕಪುರ ತಾಲ್ಲೂಕಿನ ಕೆಬ್ಬಳ್ಳಿಯ ಕೆ.ಸಿ. ಶಿವರಾಜು (40), ಚೀರನಕುಪ್ಪೆಯ ಮಂಜುನಾಥ (35) ಬಂಧಿತರು. ಏಪ್ರಿಲ್ 4 ರಂದು ಕುಕ್ಕೂರು ಗ್ರಾಮದ ವೃದ್ದೆ ನಿಂಗಮ್ಮ ಅವರು ತಮ್ಮ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಬೈಕ್ನಲ್ಲಿ ಬಂದಿದದ ಆರೋಪಿಗಳು ನೀರಿನ ಬಾಟೆಲ್ ಖರೀದಿಸುವ ನೆಪದಲ್ಲಿ ವೃದ್ದೆಯ ಕುತ್ತಿಗೆಯಲ್ಲಿದ್ದ 63 ಗ್ರಾಂ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದರು. ಈ ಕುರಿತು ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಸೂಕ್ತ ಮಾಹಿತಿ ಕಲೆಹಾಕಿ, ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಲಿಗೆ ಮಾಡಲಾಗಿದ್ದ ಸುಮಾರು ₹7,75 ಲಕ್ಷ ಮೌಲ್ಯದ 63 ಗ್ರಾಂ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಕೆ ಮಾಡಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.</p>.<p>ಆರೋಪಿಗಳು ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಸೇರಿ ಒಟ್ಟು ಮೂರು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ. ಪ್ರಕಾಶ್, ಸಬ್ಇನ್ ಸ್ಪೆಕ್ಟರ್ ಮನೋಹರ್, ಸಿಬ್ಬಂದಿ ಶಿವಕುಮಾರ್, ಹನುಮಂತಶೆಟ್ಟಿ, ಚೇತನ್, ಪವನ್ ಕುಮಾರ್, ಶಿವು, ನಂದೀಶ್, ಮಹದೇವ್, ಜೀಪ್ ಚಾಲಕ ಪ್ರಕಾಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-18-1062106703</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>