<p><strong>ಚನ್ನಪಟ್ಟಣ</strong>: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ದಿಢೀರ್ ಏರಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಹಾಗೂ ತಾಲ್ಲೂಕು ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಮಂಗಳವಾರ ನಗರದ ಸರ್ಕಾರಿ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.</p><p>ವಾಣಿಜ್ಯ ಸಿಲಿಂಡರ್ಗಳನ್ನು ಆಸ್ಪತ್ರೆ ಸ್ಟ್ರೆಚರ್ ಮೇಲೆ ಇಟ್ಟು ಅವುಗಳಿಗೆ ಹೂಮಾಲೆ ಹಾಕಿ ಬಸ್ ನಿಲ್ದಾಣದಿಂದ ಗಾಂಧಿ ಭವನದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.</p>.<p>ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ದುಪ್ಪಟ್ಟು ಏರಿಸುವ ಮೂಲಕ ಸಾಮಾನ್ಯ ವ್ಯಾಪಾರಿಗಳು, ಫುಟ್ಪಾತ್ ವ್ಯಾಪಾರಿಗಳು, ಸಣ್ಣಪುಟ್ಟ ವಾಣಿಜ್ಯೋದ್ಯಮಿಗಳು, ಹೋಟೆಲ್ ಉದ್ಯಮಿಗಳ ಬದುಕಿನಲ್ಲಿ ಚಲ್ಲಾಟವಾಡುತ್ತಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಸಾಗರ್ ಆಕ್ರೋಶ ವ್ಯಕ್ತಪಡಿಸಿದರು.</p><p>ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಕಳೆದ ಡಿಸೆಂಬರ್ನಲ್ಲಿ ₹1,684 ಇತ್ತು. ಈಗ ಅದರ ಬೆಲೆ ₹3,202 ಆಗಿದೆ. ಕೇವಲ ಐದು ತಿಂಗಳಲ್ಲಿ ಬೆಲೆ ದುಪ್ಪಟ್ಟಾಗಿದೆ. ನಾಲ್ಕು ದಿನದ ಹಿಂದೆ ಏಕಾಏಕಿ ಮತ್ತೆ ₹993 ಏರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಕೂಡಲೇ ಗ್ಯಾಸ್ ಸಿಲಿಂಡರ್ ಬೆಲೆ ಕಡಿಮೆ ಮಾಡಬೇಕು ಎಂದರು. ಪಂಚರಾಜ್ಯಗಳ ಚುನಾವಣೆಗಿಂತ ಮೊದಲು ಗ್ಯಾಸ್ ಬೆಲೆ ಏರಿಕೆ ಮಾಡಿದ್ದರೆ ಆಗ ಸಾಮಾನ್ಯ ಜನರಿಗೆ ಬಿಜೆಪಿ ಇರಾದೆ ತಿಳಿಯುತ್ತಿತ್ತು. ದೇಶದ ಜನತೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಕೆಲಸ ಮಾಡುತ್ತಿದ್ದರು ಎಂದು ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಅರ್ತಿತಾ ಆಕ್ರೋಶ ವ್ಯಕ್ತಪಡಿಸಿದರು.</p><p>ಕೆಪಿಸಿಸಿ ಮಹಿಳಾ ಘಟಕದ ಜನರಲ್ ಸೆಕ್ರೆಟರಿ ಪರೋಮಿನ್ ದಾಸ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುಜಯ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಶಿವಕುಮಾರ್, ಜಗದೀಶ್, ಮಂಜೇಶ್, ಕಾರ್ತಿಕಾ, ಮನು, ಸಂಪತ್, ಸುದರ್ಶಶನ್, ಪ್ರದೀಪ್, ತೌಸಿಫ್, ಮಸಿರ್, ಭೂಷಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ದಿಢೀರ್ ಏರಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಹಾಗೂ ತಾಲ್ಲೂಕು ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಮಂಗಳವಾರ ನಗರದ ಸರ್ಕಾರಿ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.</p><p>ವಾಣಿಜ್ಯ ಸಿಲಿಂಡರ್ಗಳನ್ನು ಆಸ್ಪತ್ರೆ ಸ್ಟ್ರೆಚರ್ ಮೇಲೆ ಇಟ್ಟು ಅವುಗಳಿಗೆ ಹೂಮಾಲೆ ಹಾಕಿ ಬಸ್ ನಿಲ್ದಾಣದಿಂದ ಗಾಂಧಿ ಭವನದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.</p>.<p>ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ದುಪ್ಪಟ್ಟು ಏರಿಸುವ ಮೂಲಕ ಸಾಮಾನ್ಯ ವ್ಯಾಪಾರಿಗಳು, ಫುಟ್ಪಾತ್ ವ್ಯಾಪಾರಿಗಳು, ಸಣ್ಣಪುಟ್ಟ ವಾಣಿಜ್ಯೋದ್ಯಮಿಗಳು, ಹೋಟೆಲ್ ಉದ್ಯಮಿಗಳ ಬದುಕಿನಲ್ಲಿ ಚಲ್ಲಾಟವಾಡುತ್ತಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಸಾಗರ್ ಆಕ್ರೋಶ ವ್ಯಕ್ತಪಡಿಸಿದರು.</p><p>ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಕಳೆದ ಡಿಸೆಂಬರ್ನಲ್ಲಿ ₹1,684 ಇತ್ತು. ಈಗ ಅದರ ಬೆಲೆ ₹3,202 ಆಗಿದೆ. ಕೇವಲ ಐದು ತಿಂಗಳಲ್ಲಿ ಬೆಲೆ ದುಪ್ಪಟ್ಟಾಗಿದೆ. ನಾಲ್ಕು ದಿನದ ಹಿಂದೆ ಏಕಾಏಕಿ ಮತ್ತೆ ₹993 ಏರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಕೂಡಲೇ ಗ್ಯಾಸ್ ಸಿಲಿಂಡರ್ ಬೆಲೆ ಕಡಿಮೆ ಮಾಡಬೇಕು ಎಂದರು. ಪಂಚರಾಜ್ಯಗಳ ಚುನಾವಣೆಗಿಂತ ಮೊದಲು ಗ್ಯಾಸ್ ಬೆಲೆ ಏರಿಕೆ ಮಾಡಿದ್ದರೆ ಆಗ ಸಾಮಾನ್ಯ ಜನರಿಗೆ ಬಿಜೆಪಿ ಇರಾದೆ ತಿಳಿಯುತ್ತಿತ್ತು. ದೇಶದ ಜನತೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಕೆಲಸ ಮಾಡುತ್ತಿದ್ದರು ಎಂದು ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಅರ್ತಿತಾ ಆಕ್ರೋಶ ವ್ಯಕ್ತಪಡಿಸಿದರು.</p><p>ಕೆಪಿಸಿಸಿ ಮಹಿಳಾ ಘಟಕದ ಜನರಲ್ ಸೆಕ್ರೆಟರಿ ಪರೋಮಿನ್ ದಾಸ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುಜಯ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಶಿವಕುಮಾರ್, ಜಗದೀಶ್, ಮಂಜೇಶ್, ಕಾರ್ತಿಕಾ, ಮನು, ಸಂಪತ್, ಸುದರ್ಶಶನ್, ಪ್ರದೀಪ್, ತೌಸಿಫ್, ಮಸಿರ್, ಭೂಷಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>