<p>ಚನ್ನಪಟ್ಟಣ: ತಾಲ್ಲೂಕಿನ ಸುಣ್ಣಘಟ್ಟ ಕೆರೆಯಲ್ಲಿ ಬೀಡುಬಿಟ್ಟಿದ್ದ ಮೂರು ಕಾಡಾನೆಗಳನ್ನು ಶನಿವಾರ ರಾತ್ರಿ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಸಲಗವೊಂದು ರೈತನ ಮೇಲೆ ದಾಳಿ ನಡೆಸಿದೆ.</p>.<p>ಕಾಡಾನೆ ದಾಳಿಯಲ್ಲಿ ಮಂಗಾಡಹಳ್ಳಿಯ ರೈತ ಕಾಂತರಾಜು(55) ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಜಮೀನಿಗೆ ರಾತ್ರಿ ನೀರು ಹಾಯಿಸಲು ಹೋಗಿದ್ದ ವೇಳೆ ಅರಣ್ಯ ಸಿಬ್ಬಂದಿ ಅಟ್ಟಿಸಿಕೊಂಡು ಬಂದ ಕಾಡಾನೆಗಳ ಪೈಕಿ ಸಲಗವೊಂದು ಕಾಂತರಾಜು ಮೇಲೆ ದಾಳಿ ನಡೆಸಿದೆ. ದಂತದಿಂದ ಹೊಟ್ಟೆಗೆ ಚುಚ್ಚಿರುವುದರಿಂದ ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೊತೆಗೆ ಪೃಷ್ಟದ ಭಾಗದ ಮೂಳೆ ಮುರಿದಿದೆ.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-14-2006308588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ತಾಲ್ಲೂಕಿನ ಸುಣ್ಣಘಟ್ಟ ಕೆರೆಯಲ್ಲಿ ಬೀಡುಬಿಟ್ಟಿದ್ದ ಮೂರು ಕಾಡಾನೆಗಳನ್ನು ಶನಿವಾರ ರಾತ್ರಿ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಸಲಗವೊಂದು ರೈತನ ಮೇಲೆ ದಾಳಿ ನಡೆಸಿದೆ.</p>.<p>ಕಾಡಾನೆ ದಾಳಿಯಲ್ಲಿ ಮಂಗಾಡಹಳ್ಳಿಯ ರೈತ ಕಾಂತರಾಜು(55) ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಜಮೀನಿಗೆ ರಾತ್ರಿ ನೀರು ಹಾಯಿಸಲು ಹೋಗಿದ್ದ ವೇಳೆ ಅರಣ್ಯ ಸಿಬ್ಬಂದಿ ಅಟ್ಟಿಸಿಕೊಂಡು ಬಂದ ಕಾಡಾನೆಗಳ ಪೈಕಿ ಸಲಗವೊಂದು ಕಾಂತರಾಜು ಮೇಲೆ ದಾಳಿ ನಡೆಸಿದೆ. ದಂತದಿಂದ ಹೊಟ್ಟೆಗೆ ಚುಚ್ಚಿರುವುದರಿಂದ ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೊತೆಗೆ ಪೃಷ್ಟದ ಭಾಗದ ಮೂಳೆ ಮುರಿದಿದೆ.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-14-2006308588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>