<p><strong>ಚನ್ನಪಟ್ಟಣ</strong>: ಆಟ–ಪಾಠದಲ್ಲಿ ತೊಡಗಿಕೊಂಡು ಸುಂದರ ಕನಸು ಕಾಣುವ ಮುಗ್ಧ ಮಕ್ಕಳನ್ನು ಕೆಲಸಕ್ಕೆ ದೂಡುವುದು ಅಪರಾಧ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ಅಭಿಪ್ರಾಯಪಟ್ಟರು.</p>.<p>ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ, ಬಾಲು ಪಬ್ಲಿಕ್ ಶಾಲೆ, ಬಾಲು ಆಸ್ಪತ್ರೆ ಆಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾನೂನು ಅರಿವು, ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಮಕ್ಕಳನ್ನು ಕೆಲಸಕ್ಕೆ ಸೇರಿಸುವುದು ಹಾಗೂ ದುಡಿಸಿಕೊಳ್ಳುವುದು ಎರಡೂ ಕೂಡ ಅಪರಾಧ. ಇದನ್ನು ಪೋಷಕರು ಹಾಗೂ ದುಡಿಸಿಕೊಳ್ಳುವವರು ಅರಿತುಕೊಳ್ಳಬೇಕು. ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ಮತ್ತೆ ಶಾಲೆಗೆ ದಾಖಲಿಸಿಕೊಳ್ಳಲು ಯೋಜನೆ ಜಾರಿಗೆ ತರಲಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.</p>.<p>ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಸುನೀಲ್ ರಾಜ್ ಅರಸ್ ಮಾತನಾಡಿ, ಜೀತಪದ್ಧತಿ ದೊಡ್ಡ ಪಿಡುಗು. ಕಾರ್ಖಾನೆ, ಹೋಟೆಲ್ಗಳಲ್ಲಿ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವವರು ಕಂಡು ಬಂದರೆ ಪೊಲೀಸರಿಗೆ ಅಥವಾ ಕಾರ್ಮಿಕ ಇಲಾಖೆಗೆ ತಿಳಿಸಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ಮಾತನಾಡಿ, ಸಮಾಜದಲ್ಲಿ ನಡೆಯುವ ಅಪರಾಧ ತಡೆಯಲು ಮಕ್ಕಳು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದರು.</p>.<p>ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯ ಚೆಟ್ಟಿ, ಶಾಲೆ ಪ್ರಾಂಶುಪಾಲರಾದ ಕವಿತಾ, ಶಿಕ್ಷಕರು, ಕಾನೂನು ಸೇವಾ ಸಮಿತಿ ಪದಾಧಿಕಾರಿಗಳು, ವಕೀಲರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಆಟ–ಪಾಠದಲ್ಲಿ ತೊಡಗಿಕೊಂಡು ಸುಂದರ ಕನಸು ಕಾಣುವ ಮುಗ್ಧ ಮಕ್ಕಳನ್ನು ಕೆಲಸಕ್ಕೆ ದೂಡುವುದು ಅಪರಾಧ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ಅಭಿಪ್ರಾಯಪಟ್ಟರು.</p>.<p>ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ, ಬಾಲು ಪಬ್ಲಿಕ್ ಶಾಲೆ, ಬಾಲು ಆಸ್ಪತ್ರೆ ಆಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾನೂನು ಅರಿವು, ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಮಕ್ಕಳನ್ನು ಕೆಲಸಕ್ಕೆ ಸೇರಿಸುವುದು ಹಾಗೂ ದುಡಿಸಿಕೊಳ್ಳುವುದು ಎರಡೂ ಕೂಡ ಅಪರಾಧ. ಇದನ್ನು ಪೋಷಕರು ಹಾಗೂ ದುಡಿಸಿಕೊಳ್ಳುವವರು ಅರಿತುಕೊಳ್ಳಬೇಕು. ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ಮತ್ತೆ ಶಾಲೆಗೆ ದಾಖಲಿಸಿಕೊಳ್ಳಲು ಯೋಜನೆ ಜಾರಿಗೆ ತರಲಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.</p>.<p>ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಸುನೀಲ್ ರಾಜ್ ಅರಸ್ ಮಾತನಾಡಿ, ಜೀತಪದ್ಧತಿ ದೊಡ್ಡ ಪಿಡುಗು. ಕಾರ್ಖಾನೆ, ಹೋಟೆಲ್ಗಳಲ್ಲಿ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವವರು ಕಂಡು ಬಂದರೆ ಪೊಲೀಸರಿಗೆ ಅಥವಾ ಕಾರ್ಮಿಕ ಇಲಾಖೆಗೆ ತಿಳಿಸಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ಮಾತನಾಡಿ, ಸಮಾಜದಲ್ಲಿ ನಡೆಯುವ ಅಪರಾಧ ತಡೆಯಲು ಮಕ್ಕಳು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದರು.</p>.<p>ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯ ಚೆಟ್ಟಿ, ಶಾಲೆ ಪ್ರಾಂಶುಪಾಲರಾದ ಕವಿತಾ, ಶಿಕ್ಷಕರು, ಕಾನೂನು ಸೇವಾ ಸಮಿತಿ ಪದಾಧಿಕಾರಿಗಳು, ವಕೀಲರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>