<p><strong>ಚನ್ನಪಟ್ಟಣ</strong>: ರಾಜಕೀಯ ಅಸ್ತಿತ್ವ ಹುಡುಕುತ್ತಿರುವ ನಿಖಿಲ್ ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಗ್ಗೆ ಏಕವಚನದಲ್ಲಿ ಮಾತನಾಡುವ ಮೂಲಕ ದೊಡ್ಡನಾಯಕ ಎಂಬ ಭ್ರಮೆಯಲ್ಲಿ ಇರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪಿ.ಡಿ.ರಾಜು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ನಿಖಿಲ್ ಅವರು ಭ್ರಮೆಯಲ್ಲಿದ್ದಾರೆ. ಅದೇ ಭ್ರಮೆಯಲ್ಲೇ ನಾನು ದೊಡ್ಡ ನಾಯಕ ಎಂದುಕೊಂಡಿದ್ದಾರೆ. ಆದರೆ, ರಾಜ್ಯದ ಜನರು ಇವರಿಗೆ ನಾಯಕನಾಗಲು ಇನ್ನೂ ಮುದ್ರೆ ಒತ್ತಿಲ್ಲ ಎನ್ನುವುದನ್ನು ಮರೆಯಬಾರದು’ಎಂದು ಟೀಕಿಸಿದರು.</p>.<p>‘ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯ ರಾಜಕಾರಣಿ. ಹಲವು ಹುದ್ದೆ ನಿಭಾಯಿಸಿದವರು. ಅಂತಹವರ ಬಗ್ಗೆ ಮಾತನಾಡುವ ಮುನ್ನ ಹತ್ತಾರು ಬಾರಿ ಯೋಚಿಸಿ. ಇಲ್ಲವೇ ಜನರ ಮುಂದೆ ನೀವು ನಗೆಪಾಟಲಿಗೆ ಗುರಿಯಾಗುತ್ತೀರಿ’ ಎಂದು ಎಚ್ಚರಿಸಿದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-14-1543893092</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ರಾಜಕೀಯ ಅಸ್ತಿತ್ವ ಹುಡುಕುತ್ತಿರುವ ನಿಖಿಲ್ ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಗ್ಗೆ ಏಕವಚನದಲ್ಲಿ ಮಾತನಾಡುವ ಮೂಲಕ ದೊಡ್ಡನಾಯಕ ಎಂಬ ಭ್ರಮೆಯಲ್ಲಿ ಇರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪಿ.ಡಿ.ರಾಜು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ನಿಖಿಲ್ ಅವರು ಭ್ರಮೆಯಲ್ಲಿದ್ದಾರೆ. ಅದೇ ಭ್ರಮೆಯಲ್ಲೇ ನಾನು ದೊಡ್ಡ ನಾಯಕ ಎಂದುಕೊಂಡಿದ್ದಾರೆ. ಆದರೆ, ರಾಜ್ಯದ ಜನರು ಇವರಿಗೆ ನಾಯಕನಾಗಲು ಇನ್ನೂ ಮುದ್ರೆ ಒತ್ತಿಲ್ಲ ಎನ್ನುವುದನ್ನು ಮರೆಯಬಾರದು’ಎಂದು ಟೀಕಿಸಿದರು.</p>.<p>‘ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯ ರಾಜಕಾರಣಿ. ಹಲವು ಹುದ್ದೆ ನಿಭಾಯಿಸಿದವರು. ಅಂತಹವರ ಬಗ್ಗೆ ಮಾತನಾಡುವ ಮುನ್ನ ಹತ್ತಾರು ಬಾರಿ ಯೋಚಿಸಿ. ಇಲ್ಲವೇ ಜನರ ಮುಂದೆ ನೀವು ನಗೆಪಾಟಲಿಗೆ ಗುರಿಯಾಗುತ್ತೀರಿ’ ಎಂದು ಎಚ್ಚರಿಸಿದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-14-1543893092</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>