<p>ಚನ್ನಪಟ್ಟಣ: ತಾಲ್ಲೂಕಿನ ಮಳೂರುಮಟ್ಟಣ ಗ್ರಾಮದ ವಿದ್ಯಾರ್ಥಿನಿ ಎಂ.ವಿ. ನಿತ್ಯಶ್ರೀ ಅವರು ಜಿಕೆವಿಕೆಯ ಬಿ.ಟೆಕ್. ಕೃಷಿ ಎಂಜಿನಿಯರಿಂಗ್ ಪದವಿ ಪರೀಕ್ಷೆಯಲ್ಲಿ ಮೂರು ಚಿನ್ನದ ಪದಕ ಪಡೆದಿದ್ದಾರೆ.</p>.<p>ಗ್ರಾಮದ ಕೃಷಿಕ ಕುಟುಂಬದ ಪ್ರತಿಭಾ– ವೀರಭದ್ರೇಗೌಡ ದಂಪತಿ ಪುತ್ರಿ ನಿತ್ಯಶ್ರೀ ಅವರು ಡಾ.ಎಸ್. ಜವರೇಗೌಡ ಚಿನ್ನದ ಪದಕ, ಸರ್ ಎಂ. ವಿಶ್ವೇಶ್ವರಯ್ಯ ಚಿನ್ನದ ಪದಕ, ಕೃಷಿ ವಿಶ್ವವಿದ್ಯಾಲಯದ ಚಿನ್ನದ ಪದಕಗಳನ್ನು ಪಡೆದಿದ್ದಾರೆ.</p>.<p>ಇತ್ತೀಚೆಗೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 60ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಥ್ ಅವರಿಂದ ಚಿನ್ನದ ಪದಕಗಳನ್ನು ಸ್ವೀಕರಿಸಿದರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-14-746245240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ತಾಲ್ಲೂಕಿನ ಮಳೂರುಮಟ್ಟಣ ಗ್ರಾಮದ ವಿದ್ಯಾರ್ಥಿನಿ ಎಂ.ವಿ. ನಿತ್ಯಶ್ರೀ ಅವರು ಜಿಕೆವಿಕೆಯ ಬಿ.ಟೆಕ್. ಕೃಷಿ ಎಂಜಿನಿಯರಿಂಗ್ ಪದವಿ ಪರೀಕ್ಷೆಯಲ್ಲಿ ಮೂರು ಚಿನ್ನದ ಪದಕ ಪಡೆದಿದ್ದಾರೆ.</p>.<p>ಗ್ರಾಮದ ಕೃಷಿಕ ಕುಟುಂಬದ ಪ್ರತಿಭಾ– ವೀರಭದ್ರೇಗೌಡ ದಂಪತಿ ಪುತ್ರಿ ನಿತ್ಯಶ್ರೀ ಅವರು ಡಾ.ಎಸ್. ಜವರೇಗೌಡ ಚಿನ್ನದ ಪದಕ, ಸರ್ ಎಂ. ವಿಶ್ವೇಶ್ವರಯ್ಯ ಚಿನ್ನದ ಪದಕ, ಕೃಷಿ ವಿಶ್ವವಿದ್ಯಾಲಯದ ಚಿನ್ನದ ಪದಕಗಳನ್ನು ಪಡೆದಿದ್ದಾರೆ.</p>.<p>ಇತ್ತೀಚೆಗೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 60ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಥ್ ಅವರಿಂದ ಚಿನ್ನದ ಪದಕಗಳನ್ನು ಸ್ವೀಕರಿಸಿದರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-14-746245240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>