<p><strong>ಚನ್ನಪಟ್ಟಣ</strong>: ನಗರದಲ್ಲಿ ಸುರಿದ ಬಿರುಗಾಳಿ ಮಳೆಗೆ ಇಲ್ಲಿನ ಕನಕನಗರದಲ್ಲಿ ವಿದ್ಯುತ್ ಪರಿವರ್ತಕವೊಂದು (ಟ್ರಾನ್ಸ್ಫಾರ್ಮರ್) ಭಾನುವಾರ ಸಂಜೆ ನೆಲಕ್ಕುರುಳಿದೆ.</p>.<p>ತಾಲ್ಲೂಕಿನ ವಿವಿಧೆಡೆಯೂ ಉತ್ತಮ ಮಳೆಯಾಗಿದೆ.</p>.<p>ಬಿರುಗಾಳಿಯ ಅಬ್ಬರಕ್ಕೆ ವಿದ್ಯುತ್ ಪರಿವರ್ತಕದ ಪಕ್ಕದಲ್ಲಿದ್ದ ಮರವೊಂದು ವಿದ್ಯುತ್ ತಂತಿಗಳ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಸನಿಹದಲ್ಲೇ ಇದ್ದ ಟಿ.ಸಿ ಧಾರಾಶಾಹಿಯಾಗಿದೆ. ವಿದ್ಯುತ್ ತಂತಿಗಳು ತುಂಡರಿಸಿ, ವಿದ್ಯುತ್ ಸರಬರಾಜು ಕಡಿತಗೊಂಡಿದ್ದರಿಂದ ಭಾರಿ ಅನಾಹುತವು ತಪ್ಪಿದೆ.</p>.<p>ವಿದ್ಯುತ್ ಪರಿವರ್ತಕ ನೆಲಕ್ಕುರುಳಿದ್ದರಿಂದ ರಾತ್ರಿಯಿಡಿ ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಇರಲಿಲ್ಲ. ಬೆಸ್ಕಾಂ ಸಿಬ್ಬಂದಿ ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಿ, ಟಿ.ಸಿ ಸರಿಪಡಿಸಿದರು. ವಿದ್ಯುತ್ ಸಂಪರ್ಕ ನೀಡಿದರು. ವಾಹನ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-14-858313963</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ನಗರದಲ್ಲಿ ಸುರಿದ ಬಿರುಗಾಳಿ ಮಳೆಗೆ ಇಲ್ಲಿನ ಕನಕನಗರದಲ್ಲಿ ವಿದ್ಯುತ್ ಪರಿವರ್ತಕವೊಂದು (ಟ್ರಾನ್ಸ್ಫಾರ್ಮರ್) ಭಾನುವಾರ ಸಂಜೆ ನೆಲಕ್ಕುರುಳಿದೆ.</p>.<p>ತಾಲ್ಲೂಕಿನ ವಿವಿಧೆಡೆಯೂ ಉತ್ತಮ ಮಳೆಯಾಗಿದೆ.</p>.<p>ಬಿರುಗಾಳಿಯ ಅಬ್ಬರಕ್ಕೆ ವಿದ್ಯುತ್ ಪರಿವರ್ತಕದ ಪಕ್ಕದಲ್ಲಿದ್ದ ಮರವೊಂದು ವಿದ್ಯುತ್ ತಂತಿಗಳ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಸನಿಹದಲ್ಲೇ ಇದ್ದ ಟಿ.ಸಿ ಧಾರಾಶಾಹಿಯಾಗಿದೆ. ವಿದ್ಯುತ್ ತಂತಿಗಳು ತುಂಡರಿಸಿ, ವಿದ್ಯುತ್ ಸರಬರಾಜು ಕಡಿತಗೊಂಡಿದ್ದರಿಂದ ಭಾರಿ ಅನಾಹುತವು ತಪ್ಪಿದೆ.</p>.<p>ವಿದ್ಯುತ್ ಪರಿವರ್ತಕ ನೆಲಕ್ಕುರುಳಿದ್ದರಿಂದ ರಾತ್ರಿಯಿಡಿ ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಇರಲಿಲ್ಲ. ಬೆಸ್ಕಾಂ ಸಿಬ್ಬಂದಿ ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಿ, ಟಿ.ಸಿ ಸರಿಪಡಿಸಿದರು. ವಿದ್ಯುತ್ ಸಂಪರ್ಕ ನೀಡಿದರು. ವಾಹನ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-14-858313963</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>