ಸಮುದಾಯದ ಕೆಲವು ಯುವಕರು ಶವವನ್ನು ಕಚೇರಿಯ ಆವರಣದಲ್ಲೆ ಸಂಸ್ಕಾರ ಮಾಡಲು ಗುಂಡಿ ತೋಡಲು ಪ್ರಯತ್ನಿಸಿದರು. ಅವರನ್ನು ಪೊಲೀಸರು ತಡೆದರು. ಅಧಿಕಾರಿಗಳ ಮನವೊಲಿಕೆಗೆ ಮಣಿಯದ ಕುಟುಂಬಸ್ಥರು ರಾತ್ರಿ ಯಾದರೂ ಮೃತದೇಹವನ್ನು ಕಚೇರಿ ಬಳಿಯಿಂದ ತೆರವುಗೊಳಿಸಲಿಲ್ಲ. ಪ್ರತ್ಯೇಕ ಸ್ಮಶಾನ ಜಾಗ ಸಿಗುವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಎಂದು ಪಟ್ಟು ಹಿಡಿದರು.