<p>ಚನ್ನಪಟ್ಟಣ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಗಾಲ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲ್ಲೂಕಿನ ಇಗ್ಗಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಮಾದಕ ವಸ್ತು ವಿರೋಧಿ ದಿನಾಚರಣೆ ಹಮ್ಮಿಕೊಂಡಿತು.</p>.<p>ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಮಾತನಾಡಿ, ಯುವಕರು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.</p>.<p>ದೇಶದ ಬೆನ್ನೆಲುಬು ಆಗಿರುವ ಯುವಕರು ಮಾದಕ ವಸ್ತುಗಳಿಂದ ದಾರಿ ತಪ್ಪುತ್ತಿರುವುದು ದುರಂತದ ಸಂಗತಿ. ಈ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ಬಿದ್ದವರ ಸಂಖ್ಯೆ ಅಪಾರ. ವಿದ್ಯಾರ್ಥಿಗಳು ಇದರಿಂದ ದೂರು ವಿದ್ದು, ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲ ರವಿಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸಾರ್ವಜನಿಕರಿಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.</p>.<p>ಯೋಜನೆಯ ಚನ್ನಪಟ್ಟಣ ವಲಯದ ಅಧಿಕಾರಿ ರೇಷ್ಮಾ, ಸೋಗಾಲ ವಲಯದ ಮೇಲ್ವಿಚಾರಕಿ ಭಾಗ್ಯ, ಇಗ್ಗಲೂರು ವಲಯದ ಒಕ್ಕೂಟ ಅಧ್ಯಕ್ಷ ನಾಗರಾಜು, ಸೇವಾ ಪ್ರತಿನಿಧಿ ಛಾಯಾಕುಮಾರಿ, ಉಪನ್ಯಾಸಕರಾದ ಚಂದ್ರಕಲಾ, ಅಂಬುಜಾ, ಮಹದೇವಸ್ವಾಮಿ, ಶಿವನಂಜೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಗಾಲ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲ್ಲೂಕಿನ ಇಗ್ಗಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಮಾದಕ ವಸ್ತು ವಿರೋಧಿ ದಿನಾಚರಣೆ ಹಮ್ಮಿಕೊಂಡಿತು.</p>.<p>ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಮಾತನಾಡಿ, ಯುವಕರು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.</p>.<p>ದೇಶದ ಬೆನ್ನೆಲುಬು ಆಗಿರುವ ಯುವಕರು ಮಾದಕ ವಸ್ತುಗಳಿಂದ ದಾರಿ ತಪ್ಪುತ್ತಿರುವುದು ದುರಂತದ ಸಂಗತಿ. ಈ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ಬಿದ್ದವರ ಸಂಖ್ಯೆ ಅಪಾರ. ವಿದ್ಯಾರ್ಥಿಗಳು ಇದರಿಂದ ದೂರು ವಿದ್ದು, ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲ ರವಿಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸಾರ್ವಜನಿಕರಿಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.</p>.<p>ಯೋಜನೆಯ ಚನ್ನಪಟ್ಟಣ ವಲಯದ ಅಧಿಕಾರಿ ರೇಷ್ಮಾ, ಸೋಗಾಲ ವಲಯದ ಮೇಲ್ವಿಚಾರಕಿ ಭಾಗ್ಯ, ಇಗ್ಗಲೂರು ವಲಯದ ಒಕ್ಕೂಟ ಅಧ್ಯಕ್ಷ ನಾಗರಾಜು, ಸೇವಾ ಪ್ರತಿನಿಧಿ ಛಾಯಾಕುಮಾರಿ, ಉಪನ್ಯಾಸಕರಾದ ಚಂದ್ರಕಲಾ, ಅಂಬುಜಾ, ಮಹದೇವಸ್ವಾಮಿ, ಶಿವನಂಜೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>