<p><strong>ಚನ್ನಪಟ್ಟಣ</strong>: ನಗರದ ಹಿಂದುಳಿದ ವರ್ಗಗಳ ಮಹಿಳಾ ವಸತಿ ನಿಲಯದಲ್ಲಿ ಶಿಕ್ಷಣ ಫೌಂಡೇಷನ್ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಮೂರು ದಿನಗಳ ಕೌಶಲ್ಯ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಗುರುವಾರ ನಡೆಯಿತು. </p>.<p>ಸಾಹಿತಿ ಡಾ. ವಿಜಯ್ ರಾಂಪುರ ಮಾತನಾಡಿ, ‘ಇಂದಿನ ಸ್ಮರ್ಧಾತ್ಮಕ ಯುಗದಲ್ಲಿ ಕುಶಲತೆ ಮತ್ತು ಸೂಕ್ಷ್ಮ ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಂಡರೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯದ ಬದುಕು ಉಜ್ವಲವಾಗುತ್ತದೆ’ ಎಂದು ಪ್ರತಿಪಾದಿಸಿದರು. </p>.<p>ಇಂದು ಕೌಶಲ್ಯಾಧಾರಿತ ಹಾಗೂ ತಾಂತ್ರಿಕ ಶಿಕ್ಷಣ ಮಹತ್ವ ಪಡೆದುಕೊಳ್ಳುತ್ತಿದೆ. ಈ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ವಿದ್ಯಾರ್ಥಿಗಳು ಕೌಶಲ್ಯ ತರಬೇತಿ ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇಂತಹ ತರಬೇತಿಗಳನ್ನು ವಿದ್ಯಾರ್ಥಿನಿಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಸಂಸ್ಥೆಯ ಜಿಲ್ಲಾ ಸಂಯೋಜಕ ಯೋಗೇಶ್ ದ್ಯಾವಪಟ್ಟಣ ಮಾತನಾಡಿ, ಪ್ರಸ್ತುತ ಕೌಶಲ್ಯ ವೃದ್ಧಿಗಾಗಿ ವಿದ್ಯಾರ್ಥಿನಿಯರಿಗೆ ಗುಂಪು ಚರ್ಚೆ, ಕಾರ್ಯಾಗಾರ, ಬುದ್ಧಿ ಪ್ರದರ್ಶನ ಮತ್ತು ಕೈಚಳಕ ತರಬೇತಿಗಳ ಮೂಲಕ ಅನುಭವಾತ್ಮಕ ಕಲಿಕೆ ಒದಗಿಸಲಾಯಿತು. ಉದ್ಯಮಶೀಲತೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದರು.</p>.<p>ಸಂಸ್ಥೆಯ ತರಬೇತುದಾರ ಎಂ.ಎ. ಸುದರ್ಶನ್, ವಸತಿ ನಿಲಯದ ಮೇಲ್ವಿಚಾರಕಿ ಪ್ರಭಾವತಿ ಹಾಜರಿದ್ದರು. ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪಿಯುಸಿ ಹಾಗೂ ಪದವಿ ಹಂತದ 70 ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ನಗರದ ಹಿಂದುಳಿದ ವರ್ಗಗಳ ಮಹಿಳಾ ವಸತಿ ನಿಲಯದಲ್ಲಿ ಶಿಕ್ಷಣ ಫೌಂಡೇಷನ್ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಮೂರು ದಿನಗಳ ಕೌಶಲ್ಯ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಗುರುವಾರ ನಡೆಯಿತು. </p>.<p>ಸಾಹಿತಿ ಡಾ. ವಿಜಯ್ ರಾಂಪುರ ಮಾತನಾಡಿ, ‘ಇಂದಿನ ಸ್ಮರ್ಧಾತ್ಮಕ ಯುಗದಲ್ಲಿ ಕುಶಲತೆ ಮತ್ತು ಸೂಕ್ಷ್ಮ ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಂಡರೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯದ ಬದುಕು ಉಜ್ವಲವಾಗುತ್ತದೆ’ ಎಂದು ಪ್ರತಿಪಾದಿಸಿದರು. </p>.<p>ಇಂದು ಕೌಶಲ್ಯಾಧಾರಿತ ಹಾಗೂ ತಾಂತ್ರಿಕ ಶಿಕ್ಷಣ ಮಹತ್ವ ಪಡೆದುಕೊಳ್ಳುತ್ತಿದೆ. ಈ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ವಿದ್ಯಾರ್ಥಿಗಳು ಕೌಶಲ್ಯ ತರಬೇತಿ ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇಂತಹ ತರಬೇತಿಗಳನ್ನು ವಿದ್ಯಾರ್ಥಿನಿಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಸಂಸ್ಥೆಯ ಜಿಲ್ಲಾ ಸಂಯೋಜಕ ಯೋಗೇಶ್ ದ್ಯಾವಪಟ್ಟಣ ಮಾತನಾಡಿ, ಪ್ರಸ್ತುತ ಕೌಶಲ್ಯ ವೃದ್ಧಿಗಾಗಿ ವಿದ್ಯಾರ್ಥಿನಿಯರಿಗೆ ಗುಂಪು ಚರ್ಚೆ, ಕಾರ್ಯಾಗಾರ, ಬುದ್ಧಿ ಪ್ರದರ್ಶನ ಮತ್ತು ಕೈಚಳಕ ತರಬೇತಿಗಳ ಮೂಲಕ ಅನುಭವಾತ್ಮಕ ಕಲಿಕೆ ಒದಗಿಸಲಾಯಿತು. ಉದ್ಯಮಶೀಲತೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದರು.</p>.<p>ಸಂಸ್ಥೆಯ ತರಬೇತುದಾರ ಎಂ.ಎ. ಸುದರ್ಶನ್, ವಸತಿ ನಿಲಯದ ಮೇಲ್ವಿಚಾರಕಿ ಪ್ರಭಾವತಿ ಹಾಜರಿದ್ದರು. ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪಿಯುಸಿ ಹಾಗೂ ಪದವಿ ಹಂತದ 70 ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>