ಟೊಯೊಟಾ ಕಂಪನಿಯ ಪ್ರವೇಶ ದ್ವಾರದ ಮುಂಭಾಗ ಬೇರೆ ಕಂಪನಿಯೊಂದಕ್ಕೆ ಸೇರಿದ ಖಾಲಿ ಜಾಗದಲ್ಲಿ ಕಾರ್ಮಿಕರು ಪೆಂಡಾಲ್ ಹಾಕಿ ತಿಂಗಳಿನಿಂದ ಪ್ರತಿಭಟನೆ ನಡೆಸಿದ್ದರು. ಕೈಗಾರಿಕೆ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದಕ್ಕೆ ಕಾರಣ ಕೇಳಿ ಕೆಐಎಡಿಬಿಯು ಸಂಬಂಧಿಸಿದ ಕಂಪನಿ ಮಾಲೀಕರಿಗೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಆ ಕಂಪನಿಯ ಮಾಲೀಕರು ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ಗುರುವಾರ ಸಂಜೆ ಪ್ರತಿಭಟನೆ ಸ್ಥಳದಲ್ಲಿ ಇದ್ದ ಪೆಂಡಾಲ್ ಅನ್ನು ತೆರವುಗೊಳಿಸಿದ್ದರು.