ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲಮಂಗಲ: ಚಿರತೆ ಸೆರೆ

Last Updated 15 ಸೆಪ್ಟೆಂಬರ್ 2020, 14:13 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಜಾಲಮಂಗಲ ಗ್ರಾಮದಲ್ಲಿ ಸೋಮವಾರ ರಾತ್ರಿ ಮೂರು ವರ್ಷದ ಗಂಡು ಚಿರತೆ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿದೆ.

ಜಾಲಮಂಗಲ ಸುತ್ತಲಿನ ಗುಡ್ಡಗಳಲ್ಲಿ ಚಿರತೆಗಳು ವಾಸವಿವೆ. ಈಚೆಗೆ ಅವು ಗ್ರಾಮಕ್ಕೆ ನುಗ್ಗಿ ಸಾಕುಪ್ರಾಣಿಗಳನ್ನು ಹೊತ್ತೊಯ್ಯುವುದು ಹೆಚ್ಚಾಗಿತ್ತು. ಗ್ರಾಮದ ಆಸುಪಾಸಿನಲ್ಲಿ ಕಾಣಿಸಿಕೊಂಡಿದ್ದರಿಂದ ಜನರಲ್ಲಿ ಆತಂಕ ಹೆಚ್ಚಿತ್ತು. ಹೀಗಾಗಿ ಅವುಗಳನ್ನು ಸೆರೆ ಹಿಡಿಯುವಂತೆ ಜನರು ಮನವಿ ಮಾಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಸೆರೆಯಾದ ಚಿರತೆಯನ್ನು ಸ್ಥಳಾಂತರಿಸಿದ್ದು, ಮಂಗಳವಾರ ಸಂಜೆ ಕಾಡಿಗೆ ಬಿಡಲಾಯಿತು.

ಕಾರ್ಯಾಚರಣೆಯಲ್ಲಿ ಎಸಿಎಫ್ ರಾಮಕೃಷ್ಣಪ್ಪ, ರಾಮನಗರ ವಲಯ ಅರಣ್ಯಾಧಿಕಾರಿ ಕಿರಣ್‌ಮಾರ್, ಉಪವಲಯ ಅರಣ್ಯ ಅಧಿಕಾರಿ ವಾಸು, ಅರಣ್ಯ ರಕ್ಷಕರಾದ ರವಿ, ಶಾಂತಕುಮಾರ್, ಮಂಜುನಾಥ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT