ಸಮನ್ವಯದ ಕೊರತೆ: ಬಾಲ್ಯ ವಿವಾಹ ತಡೆಯಲೆಂದೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ರಕ್ಷಣಾ ಸಮಿತಿ ಹಾಗೂ ಪೊಲೀಸರು ಇದ್ದಾರೆ. ಜತೆಗೆ ಮಕ್ಕಳ ಸಹಾಯವಾಣಿಯೂ ಕಾರ್ಯ ನಿರ್ವಹಿಸುತ್ತಿದೆ. ದೂರು ಬಂದ ಸಂದರ್ಭಗಳಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾಗಿ ತಡೆಗಟ್ಟುವುದು, ಸಂಬಂಧಿಸಿದವರ ಮೇಲೆ ದೂರು ದಾಖಲಿಸುವುದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಇಲಾಖೆಗಳ ಕರ್ತವ್ಯ. ಆದರೆ, ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳುತ್ತಾರೆ.