ಜಮಾಲ್ ಪಾಳ್ಯದ ಬಳಿ ಕೆ–ಶಿಪ್ ಅಧಿಕಾರಿಗಳು ರಸ್ತೆ ನಿರ್ಮಿಸುವ ಮುನ್ನ ಮುಖ್ಯ ರಸ್ತೆಯಿಂದ ಉರ್ದು ಶಾಲೆಗೆ ಹೋಗಲು ಸರ್ವೀಸ್ ರಸ್ತೆ ನಿರ್ಮಿಸುವುದಾಗಿ ಭರವಸೆ ನೀಡಿದ್ದರು. ರಸ್ತೆ ನಿರ್ಮಾಣವಾಗಿ ಒಂದು ವರ್ಷ ಕಳೆದಿದೆ. ಆದರೆ, ಇನ್ನೂ ಸರ್ವೀಸ್ ರಸ್ತೆ ನಿರ್ಮಿಸಿಲ್ಲ. ಇದರಿಂದ ಕೊರಕಲು ಮಾರ್ಗದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಹೋಗುವ ದುಃಸ್ಥಿತಿ ನಿರ್ಮಾಣವಾಗಿದ್ದು, ಕೆಲ ವಿದ್ಯಾರ್ಥಿಗಳು ಬಿದ್ದು, ಗಾಯಗೊಂಡಿದ್ದಾರೆ ಎಂದರು.