<p><strong>ಕನಕಪುರ:</strong> ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳನ್ನು ಯಾವುದೇ ಕೆಲಸಗಳಿಗೆ ಬಳಸಿಕೊಳ್ಳಬಾರದೆಂದು ಸರ್ಕಾರ ಕಾನೂನು ರೂಪಿಸಿದೆ. ಆದರೆ, ಹುಲಿಬಲೆ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ನೀರಿನ ತೊಟ್ಟಿಗೆ ಇಳಿಸಿ ಸ್ವಚ್ಛ ಮಾಡುವ ಕೆಲಸ ಮಾಡಿಸಿದ್ದಾರೆ ಎಂದು ದೂರಲಾಗಿದೆ.</p>.<p>ಶಾಲೆಯ ಐವರು ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು ಶನಿವಾರ ನೀರಿನ ತೊಟ್ಟಿಗೆ ಇಳಿಸಿ ಸ್ವಚ್ಛಗೊಳಿಸುವ ಕೆಲಸ ಮಾಡಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.</p>.<p>ಏಣಿ ಸಹಾಯದಿಂದ ಮಕ್ಕಳನ್ನು ನೀರಿನ ಟ್ಯಾಂಕ್ ಒಳಗೆ ಇಳಿದು ಸ್ವಚ್ಛ ಮಾಡಿದ್ದಾರೆ. ಈ ವಿಷಯ ತಿಳಿದ ಪೋಷಕರು ಮುಖ್ಯ ಶಿಕ್ಷಕರನ್ನು ಪ್ರಶ್ನಿಸಿ, ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಮುಖ್ಯ ಶಿಕ್ಷಕಿ ರಾಜಲಕ್ಷ್ಮಿ, ನೀರಿನ ತೊಟ್ಟಿ ಸ್ವಚ್ಛಗೊಳಿಸಲು ಸಿಬ್ಬಂದಿಗೆ ಸೂಚಿಸಲಾಗಿತ್ತು. ಅವರ ಜತೆ ವಿದ್ಯಾರ್ಥಿಗಳು ಹೋಗಿರುವುದು ಗೊತ್ತಾಗಿಲ್ಲ ಎಂದು ಪೋಷಕರನ್ನು ಸಮಾಧಾನಪಡಿಸಲು ಯತ್ನಿಸಿದರು.</p>.<p>ಇದರಿಂದ ಸಮಾಧಾನಗೊಳ್ಳದ ಪೋಷಕರು ಮುಖ್ಯ ಶಿಕ್ಷಕಿ ರಾಜಲಕ್ಷ್ಮಿ ವಿರುದ್ಧ ಶಿಕ್ಷಣ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಇಒ ಅವರಿಗೆ ದೂರವಾಣಿ ಮೂಲಕ ಪೋಷಕರು ಮಾಹಿತಿ ನೀಡಿದರು.</p>.<p>10 ಅಡಿ ಎತ್ತರದ ನೀರಿನ ತೊಟ್ಟಿಗೆ ಇಳಿಸಿ ಮಕ್ಕಳಿಂದ ಕೆಲಸ ಮಾಡಿಸಿದ್ದಾರೆ. ಒಂದು ವೇಳೆ ಏನಾದರೂ ಅನಾಹುತ ಆಗಿದ್ದರೆ ಅದಕ್ಕೆ ಯಾರು ಜವಾಬ್ದಾರರು ಎಂದು ವಿದ್ಯಾರ್ಥಿ ವಿನಯ್ ಗೌಡ ತಂದೆ ತಿಮ್ಮೇಗೌಡ, ಮಿಥುನ್ ತಾಯಿ ಕಾವ್ಯ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಲೆಯಲ್ಲಿ ಶಿಕ್ಷಕರ ನಡುವೆ ಹೊಂದಾಣಿಕೆ ಕೊರತೆಯಿರುವುದರಿಂದ ಇಂದಿನ ಸಮಸ್ಯೆ ಉಲ್ಬಣಿಸಿದೆ. ಮುಂದೆ ಈ ರೀತಿ ಆಗದಂತೆ ಗಮನ ಹರಿಸಲಾಗುವುದು ಎಂದು ಮುಖ್ಯಶಿಕ್ಷಕಿ ರಾಜಲಕ್ಷ್ಮಿ ತಿಳಿಸಿದರು.</p>.<p>ಸಿಆರ್ಪಿ ಮತ್ತು ಇಸಿಒ ಸ್ಥಳ ಮಹಜರು ಮಾಡಲಿದ್ದಾರೆ. ಶಿಕ್ಷಕರು ಮತ್ತು ಪೋಷಕರಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಹಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ.ರಾಮಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳನ್ನು ಯಾವುದೇ ಕೆಲಸಗಳಿಗೆ ಬಳಸಿಕೊಳ್ಳಬಾರದೆಂದು ಸರ್ಕಾರ ಕಾನೂನು ರೂಪಿಸಿದೆ. ಆದರೆ, ಹುಲಿಬಲೆ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ನೀರಿನ ತೊಟ್ಟಿಗೆ ಇಳಿಸಿ ಸ್ವಚ್ಛ ಮಾಡುವ ಕೆಲಸ ಮಾಡಿಸಿದ್ದಾರೆ ಎಂದು ದೂರಲಾಗಿದೆ.</p>.<p>ಶಾಲೆಯ ಐವರು ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು ಶನಿವಾರ ನೀರಿನ ತೊಟ್ಟಿಗೆ ಇಳಿಸಿ ಸ್ವಚ್ಛಗೊಳಿಸುವ ಕೆಲಸ ಮಾಡಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.</p>.<p>ಏಣಿ ಸಹಾಯದಿಂದ ಮಕ್ಕಳನ್ನು ನೀರಿನ ಟ್ಯಾಂಕ್ ಒಳಗೆ ಇಳಿದು ಸ್ವಚ್ಛ ಮಾಡಿದ್ದಾರೆ. ಈ ವಿಷಯ ತಿಳಿದ ಪೋಷಕರು ಮುಖ್ಯ ಶಿಕ್ಷಕರನ್ನು ಪ್ರಶ್ನಿಸಿ, ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಮುಖ್ಯ ಶಿಕ್ಷಕಿ ರಾಜಲಕ್ಷ್ಮಿ, ನೀರಿನ ತೊಟ್ಟಿ ಸ್ವಚ್ಛಗೊಳಿಸಲು ಸಿಬ್ಬಂದಿಗೆ ಸೂಚಿಸಲಾಗಿತ್ತು. ಅವರ ಜತೆ ವಿದ್ಯಾರ್ಥಿಗಳು ಹೋಗಿರುವುದು ಗೊತ್ತಾಗಿಲ್ಲ ಎಂದು ಪೋಷಕರನ್ನು ಸಮಾಧಾನಪಡಿಸಲು ಯತ್ನಿಸಿದರು.</p>.<p>ಇದರಿಂದ ಸಮಾಧಾನಗೊಳ್ಳದ ಪೋಷಕರು ಮುಖ್ಯ ಶಿಕ್ಷಕಿ ರಾಜಲಕ್ಷ್ಮಿ ವಿರುದ್ಧ ಶಿಕ್ಷಣ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಇಒ ಅವರಿಗೆ ದೂರವಾಣಿ ಮೂಲಕ ಪೋಷಕರು ಮಾಹಿತಿ ನೀಡಿದರು.</p>.<p>10 ಅಡಿ ಎತ್ತರದ ನೀರಿನ ತೊಟ್ಟಿಗೆ ಇಳಿಸಿ ಮಕ್ಕಳಿಂದ ಕೆಲಸ ಮಾಡಿಸಿದ್ದಾರೆ. ಒಂದು ವೇಳೆ ಏನಾದರೂ ಅನಾಹುತ ಆಗಿದ್ದರೆ ಅದಕ್ಕೆ ಯಾರು ಜವಾಬ್ದಾರರು ಎಂದು ವಿದ್ಯಾರ್ಥಿ ವಿನಯ್ ಗೌಡ ತಂದೆ ತಿಮ್ಮೇಗೌಡ, ಮಿಥುನ್ ತಾಯಿ ಕಾವ್ಯ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಲೆಯಲ್ಲಿ ಶಿಕ್ಷಕರ ನಡುವೆ ಹೊಂದಾಣಿಕೆ ಕೊರತೆಯಿರುವುದರಿಂದ ಇಂದಿನ ಸಮಸ್ಯೆ ಉಲ್ಬಣಿಸಿದೆ. ಮುಂದೆ ಈ ರೀತಿ ಆಗದಂತೆ ಗಮನ ಹರಿಸಲಾಗುವುದು ಎಂದು ಮುಖ್ಯಶಿಕ್ಷಕಿ ರಾಜಲಕ್ಷ್ಮಿ ತಿಳಿಸಿದರು.</p>.<p>ಸಿಆರ್ಪಿ ಮತ್ತು ಇಸಿಒ ಸ್ಥಳ ಮಹಜರು ಮಾಡಲಿದ್ದಾರೆ. ಶಿಕ್ಷಕರು ಮತ್ತು ಪೋಷಕರಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಹಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ.ರಾಮಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>