<p>ಮರಳವಾಡಿ (ಕನಕಪುರ): ಮಕ್ಕಳಿಗೆ ಎದುರಾಗಬಹದಾದ ಸಮಸ್ಯೆಗಳ ಬಗ್ಗೆ ಪೋಷಕರಿಗೆ ತಿಳಿಸಿಕೊಡಲು ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ರಾಮಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಮರಳವಾಡಿ ಹೋಬಳಿ ಟಿ.ಹೊಸಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ 2018-19ನೇ ಸಾಲಿನ ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ನೀಡುವುದರ ಜತೆಗೆ ಉತ್ತಮ ಭವಿಷ್ಯ ರೂಪಿಸಬೇಕಾದುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.</p>.<p>‘ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ಮನೆಯಲ್ಲಿ ನಾವೆಷ್ಟು ಪೌಷ್ಠಿಕ ಆಹಾರ ನೀಡುತ್ತಿದ್ದೇವೆ ಎಂಬುದನ್ನು ವಾರ್ಷಿಕವಾಗಿ ಮಕ್ಕಳ ತೂಕದ ಮೂಲಕ ಅರಿತುಕೊಳ್ಳಬೇಕು. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ ಶಿಕ್ಷಣ ಕೊಡಿಸಬೇಕಿದೆ’ ಎಂದು ತಿಳಿಸಿದರು.</p>.<p>15 ವರ್ಷದವರೆಗೂ ಕಡ್ಡಾಯವಾಗಿ ಶಾಲೆಗೆ ಕಳಿಸಬೇಕು. ಜೀತ ಪದ್ಧತಿ ಹಾಗೂ ಕೃಷಿ ಕಾರ್ಮಿಕ ವೃತ್ತಿಯಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವಂತಿಲ್ಲ. ಇದು ಶಿಕ್ಷಾರ್ಹ ಎಂದು ಹೇಳಿದರು.</p>.<p>ಹೆಣ್ಣುಮಕ್ಕಳ ಪೋಷಣೆ ಮತ್ತು ರಕ್ಷಣೆ ಪ್ರತಿ ಕುಟುಂಬದ ಕರ್ತವ್ಯ. ಬಾಲ್ಯ ವಿವಾಹ ಮಾಡುವಂತಿಲ್ಲ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವಾಗದಂತೆ ತಡೆಗಟ್ಟಬೇಕೆಂದು ಕರೆ ನೀಡಿದರು.</p>.<p>ಮಕ್ಕಳು ಸ್ವಚ್ಛತೆಯ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು. ಶೌಚಾಲಯವನ್ನು ಕಡ್ಡಾಯವಾಗಿ ಬಳಸುವಂತೆ ಪೋಷಕರನ್ನು ಒತ್ತಾಯಿಸಬೇಕು ಎಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.</p>.<p>ಪಂಚಾಯಿತಿ ನೋಡಲ್ ಅಧಿಕಾರಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮುನಿಯಪ್ಪ ಮಾತನಾಡಿದರು.ಪಡುವಣಗೆರೆ ಪ್ರೌಢಶಾಲಾ ಶಿಕ್ಷಕ ರಮೇಶ್ ಮಕ್ಕಳ ಹಕ್ಕು ಮತ್ತು ಪೋಷಣೆಯ ಬಗ್ಗೆ ಉಪನ್ಯಾಸ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಮ್ಮ ಮರಿಯಪ್ಪ, ಉಪಾಧ್ಯಕ್ಷೆ ರೇಖಾ ದುರ್ಗೇಗೌಡ, ಸದಸ್ಯರಾದ ಸಿದ್ದರಾಜು, ಹೊಂಬಾಳೇಗೌಡ, ಅಗರ ಕುಮಾರ್, ಚಂದ್ರೇಗೌಡ, ರೇಖಾ ಸದಾನಂದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮರಳವಾಡಿ (ಕನಕಪುರ): ಮಕ್ಕಳಿಗೆ ಎದುರಾಗಬಹದಾದ ಸಮಸ್ಯೆಗಳ ಬಗ್ಗೆ ಪೋಷಕರಿಗೆ ತಿಳಿಸಿಕೊಡಲು ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ರಾಮಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಮರಳವಾಡಿ ಹೋಬಳಿ ಟಿ.ಹೊಸಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ 2018-19ನೇ ಸಾಲಿನ ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ನೀಡುವುದರ ಜತೆಗೆ ಉತ್ತಮ ಭವಿಷ್ಯ ರೂಪಿಸಬೇಕಾದುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.</p>.<p>‘ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ಮನೆಯಲ್ಲಿ ನಾವೆಷ್ಟು ಪೌಷ್ಠಿಕ ಆಹಾರ ನೀಡುತ್ತಿದ್ದೇವೆ ಎಂಬುದನ್ನು ವಾರ್ಷಿಕವಾಗಿ ಮಕ್ಕಳ ತೂಕದ ಮೂಲಕ ಅರಿತುಕೊಳ್ಳಬೇಕು. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ ಶಿಕ್ಷಣ ಕೊಡಿಸಬೇಕಿದೆ’ ಎಂದು ತಿಳಿಸಿದರು.</p>.<p>15 ವರ್ಷದವರೆಗೂ ಕಡ್ಡಾಯವಾಗಿ ಶಾಲೆಗೆ ಕಳಿಸಬೇಕು. ಜೀತ ಪದ್ಧತಿ ಹಾಗೂ ಕೃಷಿ ಕಾರ್ಮಿಕ ವೃತ್ತಿಯಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವಂತಿಲ್ಲ. ಇದು ಶಿಕ್ಷಾರ್ಹ ಎಂದು ಹೇಳಿದರು.</p>.<p>ಹೆಣ್ಣುಮಕ್ಕಳ ಪೋಷಣೆ ಮತ್ತು ರಕ್ಷಣೆ ಪ್ರತಿ ಕುಟುಂಬದ ಕರ್ತವ್ಯ. ಬಾಲ್ಯ ವಿವಾಹ ಮಾಡುವಂತಿಲ್ಲ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವಾಗದಂತೆ ತಡೆಗಟ್ಟಬೇಕೆಂದು ಕರೆ ನೀಡಿದರು.</p>.<p>ಮಕ್ಕಳು ಸ್ವಚ್ಛತೆಯ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು. ಶೌಚಾಲಯವನ್ನು ಕಡ್ಡಾಯವಾಗಿ ಬಳಸುವಂತೆ ಪೋಷಕರನ್ನು ಒತ್ತಾಯಿಸಬೇಕು ಎಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.</p>.<p>ಪಂಚಾಯಿತಿ ನೋಡಲ್ ಅಧಿಕಾರಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮುನಿಯಪ್ಪ ಮಾತನಾಡಿದರು.ಪಡುವಣಗೆರೆ ಪ್ರೌಢಶಾಲಾ ಶಿಕ್ಷಕ ರಮೇಶ್ ಮಕ್ಕಳ ಹಕ್ಕು ಮತ್ತು ಪೋಷಣೆಯ ಬಗ್ಗೆ ಉಪನ್ಯಾಸ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಮ್ಮ ಮರಿಯಪ್ಪ, ಉಪಾಧ್ಯಕ್ಷೆ ರೇಖಾ ದುರ್ಗೇಗೌಡ, ಸದಸ್ಯರಾದ ಸಿದ್ದರಾಜು, ಹೊಂಬಾಳೇಗೌಡ, ಅಗರ ಕುಮಾರ್, ಚಂದ್ರೇಗೌಡ, ರೇಖಾ ಸದಾನಂದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>