<p><strong>ಮಾಗಡಿ:</strong> ಗ್ರಾಮೀಣ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಹಕ್ಕಿನಾಳ್ ವೆಂಕಟೇಶ್ ಆಗ್ರಹಿಸಿದರು.</p>.<p>ಗುಡೇಮಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗುರುವಾರ ನಡೆದ ವಿಶೇಷ ಮಕ್ಕಳ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.</p>.<p>ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆ ವೈದ್ಯರು ಸಕಾಲದಲ್ಲಿ ಸಿಗುವುದಿಲ್ಲ. ತುರ್ತು ಸಮಯದಲ್ಲಿ ಒಬ್ಬ ದಾದಿಯೂ ಇರುವುದಿಲ್ಲ.ಪಶುವೈದ್ಯರು ಆಸ್ಪತ್ರೆಯಲ್ಲಿ ಇರುವುದು ಅಪರೂಪವಾಗಿದೆ. ಜನ ಮತ್ತು ಜಾನುವಾರುಗಳ ಆರೋಗ್ಯ ಸುಧಾರಣೆಗೆ ಪ್ರಥಮ ಆದ್ಯತೆ ನೀಡಲು ಪಂಚಾಯಿತಿ ಮುಂದಾಗಬೇಕು ಎಂದರು.</p>.<p>ಪಿಡಿಒ ಎಸ್.ಆರ್.ನರಸಿಂಹಮೂರ್ತಿ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ ಗುರುತಿಸಲಾಗಿದೆ ಎಂದರು.</p>.<p>ಎ.ಬಿ.ಜ್ಯೋತಿ ಹೇಮಂತ್ ಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ನಿರ್ಮಲ ಮಾತನಾಡಿದರು.</p>.<p>ಗುಡೇಮಾರನಹಳ್ಳಿ, ಉದ್ದಂಡಹಳ್ಳಿ, ಗರ್ಗೇಶಪುರ, ಹಕ್ಕಿನಾಳ್ ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರಾದ ರಂಗಸ್ವಾಮಿ, ಸಿದ್ದಗಂಗಯ್ಯ, ಶ್ರೀಧರ,ರವಿಕುಮಾರ್, ಎಸ್.ಎನ್.ಜಯರಾಮಯ್ಯ ಮತ್ತು ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು ಗ್ರಾಮಸ್ಥರು, ಶಾಲಾ ಮಕ್ಕಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಗ್ರಾಮೀಣ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಹಕ್ಕಿನಾಳ್ ವೆಂಕಟೇಶ್ ಆಗ್ರಹಿಸಿದರು.</p>.<p>ಗುಡೇಮಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗುರುವಾರ ನಡೆದ ವಿಶೇಷ ಮಕ್ಕಳ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.</p>.<p>ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆ ವೈದ್ಯರು ಸಕಾಲದಲ್ಲಿ ಸಿಗುವುದಿಲ್ಲ. ತುರ್ತು ಸಮಯದಲ್ಲಿ ಒಬ್ಬ ದಾದಿಯೂ ಇರುವುದಿಲ್ಲ.ಪಶುವೈದ್ಯರು ಆಸ್ಪತ್ರೆಯಲ್ಲಿ ಇರುವುದು ಅಪರೂಪವಾಗಿದೆ. ಜನ ಮತ್ತು ಜಾನುವಾರುಗಳ ಆರೋಗ್ಯ ಸುಧಾರಣೆಗೆ ಪ್ರಥಮ ಆದ್ಯತೆ ನೀಡಲು ಪಂಚಾಯಿತಿ ಮುಂದಾಗಬೇಕು ಎಂದರು.</p>.<p>ಪಿಡಿಒ ಎಸ್.ಆರ್.ನರಸಿಂಹಮೂರ್ತಿ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ ಗುರುತಿಸಲಾಗಿದೆ ಎಂದರು.</p>.<p>ಎ.ಬಿ.ಜ್ಯೋತಿ ಹೇಮಂತ್ ಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ನಿರ್ಮಲ ಮಾತನಾಡಿದರು.</p>.<p>ಗುಡೇಮಾರನಹಳ್ಳಿ, ಉದ್ದಂಡಹಳ್ಳಿ, ಗರ್ಗೇಶಪುರ, ಹಕ್ಕಿನಾಳ್ ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರಾದ ರಂಗಸ್ವಾಮಿ, ಸಿದ್ದಗಂಗಯ್ಯ, ಶ್ರೀಧರ,ರವಿಕುಮಾರ್, ಎಸ್.ಎನ್.ಜಯರಾಮಯ್ಯ ಮತ್ತು ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು ಗ್ರಾಮಸ್ಥರು, ಶಾಲಾ ಮಕ್ಕಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>