<p>ಪ್ರಜಾವಾಣಿ ವಾರ್ತೆ</p>.<p><strong>ಕುದೂರ</strong>: ಹೆಣ್ಣು ಮಕ್ಕಳಿಗೆ ಸಮಾನತೆ, ಸೂಕ್ತ ಸ್ಥಾನಮಾನ ಸಿಗಬೇಕು ಎಂದು ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಎಂಟನೇ ತರಗತಿಯ ಛಾಯಾ ಅಭಿಪ್ರಾಯಪಟ್ಟರು.</p>.<p>ಕುದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಎಲ್ಲ ಕ್ಷೇತ್ರಗಳಲ್ಲೂ ಗಣನೀಯ ಸ್ಥಾನಮಾನ ಸಿಗುವಂತಾಗಲಿ ಎಂದು ಆಶಿಸಿದರು.</p>.<p>ಕುದೂರು ಕರ್ನಾಟಕ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ವಿಷ್ಣು ವಲ್ಲಭ ಸಮ್ಮೇಳನದ ಅಧ್ಯಕ್ಷ ಭಾಷಣ ಮಾಡಿ, ಕೇವಲ ಪಠ್ಯಪುಸ್ತಕ ಓದಿ ಅಂಕಗಳಿಸಿದರೆ ಕನ್ನಡ ಭಾಷೆ ಅಭಿವೃದ್ಧಿ ಆಗುವುದಿಲ್ಲ. ಕಥೆ, ಕವನ, ಕಾದಂಬರಿ, ನಾಟಕ ಸೇರಿದಂತೆ ಸಾಹಿತ್ಯವನ್ನು ಓದಬೇಕು ಎಂದರು.</p>.<p>ಸಾಕಷ್ಟು ವಿದ್ಯಾರ್ಥಿಗಳು ಸಹಿಯನ್ನು ಇಂಗ್ಲಿಷ್ನಲ್ಲಿ ಹಾಕುತ್ತಿದ್ದಾರೆ. ಕನ್ನಡದಲ್ಲಿ ಸಹಿ ಹಾಕುವುದನ್ನು ರೂಢಿಸಿಕೊಳ್ಳಿ. ದಿನನಿತ್ಯ ಕನ್ನಡ ಪದಗಳ ಬಳಕೆ ಹೆಚ್ಚಾಗಲಿ ಎಂದರು.</p>.<p>ಸುಗ್ಗನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ತನ್ಯಶ್ರೀ, ಕನ್ನಡಿಗರಿಗೆ, ಕನ್ನಡ ಶಾಲೆಯಲ್ಲಿ ಓದಿದವರಿಗೆ ಬೆಂಗಳೂರು ದಕ್ಷಿಣ, ರಾಮನಗರ ಜಿಲ್ಲೆಯ ಸುತ್ತಮುತ್ತಲ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗ ಕೊಡಿಸಲೇಬೇಕು ಎಂದು ಒತ್ತಾಯ ಮಾಡಿದರು.</p>.<p>ಆನ್ಲೈನ್, ವೆಬ್ಗಳಲ್ಲಿ ಕನ್ನಡ ಭಾಷೆಗೆ ಪ್ರಾತಿನಿಧ್ಯ ನೀಡಲಾಗಿದೆ. ಭಾಷಾ ತರ್ಜಮೆಗೂ ಅವಕಾಶ ನೀಡಲಾಗಿದೆ. ಜನಪ್ರತಿನಿಧಿಗಳು ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಬೇಕು ಎಂದು ಹೇಳಿದರು.</p>.<p>4ನೇ ತರಗತಿ ವಿದ್ಯಾರ್ಥಿನಿ ರಚನಾ ಕಣ್ಣಿಗೆ ಬಟ್ಟೆ ಕಟ್ಟಿಸಿಕೊಂಡು ಹಲವು ವಸ್ತುಗಳನ್ನು ಗುರುತಿಸುವ ಜತೆಗೆ ಪುಸ್ತಕ ಓದಿ ಎಲ್ಲರನ್ನೂ ಅಚ್ಚರಿಗೊಳಿಸಿದಳು.</p>.<p>ಪಟ್ಟಣದ ರಾಜಬೀದಿಗಳಲ್ಲಿ ವಿದ್ಯಾರ್ಥಿಗಳ ಬ್ಯಾಂಡ್ಸೆಟ್, ಜಾನಪದ ಕಲಾತಂಡಗಳು ಹಾಗೂ ಕನ್ನಡ ಘೋಷವಾಕ್ಯಗಳೊಂದಿಗೆ ಸಮ್ಮೇಳನ ಅಧ್ಯಕ್ಷರು ಮತ್ತು ಭುವನೇಶ್ವರಿ ದೇವಿ ಮೆರವಣಿಗೆ ನಡೆಯಿತು.</p>.<p> <strong>ಸಮ್ಮೇಳನದ ನಿರ್ಣಯಗಳು...</strong> </p><p>* ಸರ್ಕಾರಿ ಶಾಲೆ ದಾಖಲಾತಿ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಲಿ. </p><p>*ಕನ್ನಡ ಮಾಧ್ಯಮದ ಮಕ್ಕಳಿಗೆ ಕೃಪಾಂಕ ಹೆಚ್ಚಿಸಲಿ. *ಸುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ ಶೇ 80ರಷ್ಟು ಉದ್ಯೋಗ ಕನ್ನಡ ಮಾಧ್ಯಮದವರಿಗೆ ಮೀಸಲಿಡಲಿ. </p><p>*ಕನ್ನಡ ಶಾಲೆಗಳಿಗೆ ಹೈ–ಟೆಕ್ ಸ್ಪರ್ಷವಾಗಲಿ. *ಕನ್ನಡ ಮಾತನಾಡಿದರೆ ದಂಡ ಹಾಕುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕಲು ಸೂಕ್ತ ನಿರ್ಣಯವಾಗಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಕುದೂರ</strong>: ಹೆಣ್ಣು ಮಕ್ಕಳಿಗೆ ಸಮಾನತೆ, ಸೂಕ್ತ ಸ್ಥಾನಮಾನ ಸಿಗಬೇಕು ಎಂದು ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಎಂಟನೇ ತರಗತಿಯ ಛಾಯಾ ಅಭಿಪ್ರಾಯಪಟ್ಟರು.</p>.<p>ಕುದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಎಲ್ಲ ಕ್ಷೇತ್ರಗಳಲ್ಲೂ ಗಣನೀಯ ಸ್ಥಾನಮಾನ ಸಿಗುವಂತಾಗಲಿ ಎಂದು ಆಶಿಸಿದರು.</p>.<p>ಕುದೂರು ಕರ್ನಾಟಕ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ವಿಷ್ಣು ವಲ್ಲಭ ಸಮ್ಮೇಳನದ ಅಧ್ಯಕ್ಷ ಭಾಷಣ ಮಾಡಿ, ಕೇವಲ ಪಠ್ಯಪುಸ್ತಕ ಓದಿ ಅಂಕಗಳಿಸಿದರೆ ಕನ್ನಡ ಭಾಷೆ ಅಭಿವೃದ್ಧಿ ಆಗುವುದಿಲ್ಲ. ಕಥೆ, ಕವನ, ಕಾದಂಬರಿ, ನಾಟಕ ಸೇರಿದಂತೆ ಸಾಹಿತ್ಯವನ್ನು ಓದಬೇಕು ಎಂದರು.</p>.<p>ಸಾಕಷ್ಟು ವಿದ್ಯಾರ್ಥಿಗಳು ಸಹಿಯನ್ನು ಇಂಗ್ಲಿಷ್ನಲ್ಲಿ ಹಾಕುತ್ತಿದ್ದಾರೆ. ಕನ್ನಡದಲ್ಲಿ ಸಹಿ ಹಾಕುವುದನ್ನು ರೂಢಿಸಿಕೊಳ್ಳಿ. ದಿನನಿತ್ಯ ಕನ್ನಡ ಪದಗಳ ಬಳಕೆ ಹೆಚ್ಚಾಗಲಿ ಎಂದರು.</p>.<p>ಸುಗ್ಗನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ತನ್ಯಶ್ರೀ, ಕನ್ನಡಿಗರಿಗೆ, ಕನ್ನಡ ಶಾಲೆಯಲ್ಲಿ ಓದಿದವರಿಗೆ ಬೆಂಗಳೂರು ದಕ್ಷಿಣ, ರಾಮನಗರ ಜಿಲ್ಲೆಯ ಸುತ್ತಮುತ್ತಲ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗ ಕೊಡಿಸಲೇಬೇಕು ಎಂದು ಒತ್ತಾಯ ಮಾಡಿದರು.</p>.<p>ಆನ್ಲೈನ್, ವೆಬ್ಗಳಲ್ಲಿ ಕನ್ನಡ ಭಾಷೆಗೆ ಪ್ರಾತಿನಿಧ್ಯ ನೀಡಲಾಗಿದೆ. ಭಾಷಾ ತರ್ಜಮೆಗೂ ಅವಕಾಶ ನೀಡಲಾಗಿದೆ. ಜನಪ್ರತಿನಿಧಿಗಳು ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಬೇಕು ಎಂದು ಹೇಳಿದರು.</p>.<p>4ನೇ ತರಗತಿ ವಿದ್ಯಾರ್ಥಿನಿ ರಚನಾ ಕಣ್ಣಿಗೆ ಬಟ್ಟೆ ಕಟ್ಟಿಸಿಕೊಂಡು ಹಲವು ವಸ್ತುಗಳನ್ನು ಗುರುತಿಸುವ ಜತೆಗೆ ಪುಸ್ತಕ ಓದಿ ಎಲ್ಲರನ್ನೂ ಅಚ್ಚರಿಗೊಳಿಸಿದಳು.</p>.<p>ಪಟ್ಟಣದ ರಾಜಬೀದಿಗಳಲ್ಲಿ ವಿದ್ಯಾರ್ಥಿಗಳ ಬ್ಯಾಂಡ್ಸೆಟ್, ಜಾನಪದ ಕಲಾತಂಡಗಳು ಹಾಗೂ ಕನ್ನಡ ಘೋಷವಾಕ್ಯಗಳೊಂದಿಗೆ ಸಮ್ಮೇಳನ ಅಧ್ಯಕ್ಷರು ಮತ್ತು ಭುವನೇಶ್ವರಿ ದೇವಿ ಮೆರವಣಿಗೆ ನಡೆಯಿತು.</p>.<p> <strong>ಸಮ್ಮೇಳನದ ನಿರ್ಣಯಗಳು...</strong> </p><p>* ಸರ್ಕಾರಿ ಶಾಲೆ ದಾಖಲಾತಿ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಲಿ. </p><p>*ಕನ್ನಡ ಮಾಧ್ಯಮದ ಮಕ್ಕಳಿಗೆ ಕೃಪಾಂಕ ಹೆಚ್ಚಿಸಲಿ. *ಸುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ ಶೇ 80ರಷ್ಟು ಉದ್ಯೋಗ ಕನ್ನಡ ಮಾಧ್ಯಮದವರಿಗೆ ಮೀಸಲಿಡಲಿ. </p><p>*ಕನ್ನಡ ಶಾಲೆಗಳಿಗೆ ಹೈ–ಟೆಕ್ ಸ್ಪರ್ಷವಾಗಲಿ. *ಕನ್ನಡ ಮಾತನಾಡಿದರೆ ದಂಡ ಹಾಕುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕಲು ಸೂಕ್ತ ನಿರ್ಣಯವಾಗಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>