<p><strong>ಕೋಡಿಹಳ್ಳಿ (ಕನಕಪುರ): </strong>ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಪುಸ್ತಕದ ಹುಳುವಾಗದೆ ಪುಸ್ತಕದ ಆಚೆಗಿನ ಜಗತ್ತನ್ನು ಚಿಕ್ಕಂದಿನಿಂದಲೇ ತಿಳಿದುಕೊಳ್ಳಬೇಕು ಎಂದು ಡಿಕೆಎಸ್ ಹಿಪ್ಪೊ ಕ್ಯಾಂಪಸ್ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷೆ ಗೌರಮ್ಮ ಕೆಂಪೇಗೌಡ ಹೇಳಿದರು.</p>.<p>ಇಲ್ಲಿನ ಕೋಡಿಹಳ್ಳಿ ಹೋಬಳಿ ಪ್ಲಾಂಟೇಷನ್ ಬಳಿಯಿರುವ ಡಿಕೆಎಸ್ ಹಿಪ್ಪೊ ಕ್ಯಾಂಪಸ್ ಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮಕ್ಕಳಿಗೆ ಪಾಠಕ್ಕಿಂತ ಆಟ ಆಡುವುದೆಂದರೆ ಹೆಚ್ಚು ಖುಷಿ. ಮಕ್ಕಳು ಆಟ ಆಡಿಕೊಂಡೇ ಬೆಳೆಯಬೇಕು. ಅದಕ್ಕಾಗಿ ಶಾಲೆಗಳಲ್ಲಿ ಮಕ್ಕಳಿಗೆ ಆಟದ ಮೂಲಕವೇ ಎಲ್ಲವನ್ನೂ ಕಲಿಸಬೇಕು. ಹೆಚ್ಚು ಸಮಯ ಆಟಕ್ಕೆ ಅವಕಾಶ ನೀಡಬೇಕೆಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.</p>.<p>ಶಾಲೆಯ ಮನೋಜ್ ಮತ್ತು ಯಶೋಧ ಕ್ರೀಡಾಜ್ಯೋತಿ ತಂದರು. ಶಾಂತಿಯ ಸಂಕೇತವಾಗಿ ಪಾರಿವಾಳಗಳನ್ನು ಹಾರಿಸಲಾಯಿತು. ಪುಣಾಣಿ ಮಕ್ಕಳು ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.</p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಮುನಿಹುಚ್ಚೇಗೌಡ, ಪಂಚಾಯಿತಿ ಸದಸ್ಯೆ ರಾಜೇಶ್ವರಿ, ಶಾಲೆಯ ಮುಖ್ಯ ಶಿಕ್ಷಕಿ ಆಂತೋಣಿ ಮೇರಿ, ಸಹ ಶಿಕ್ಷಕರಾದ ಆಶಾ, ಸಂಜನಾ ಕೈಲಾಸ್, ನೇತ್ರಾವತಿ, ದಿವ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಡಿಹಳ್ಳಿ (ಕನಕಪುರ): </strong>ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಪುಸ್ತಕದ ಹುಳುವಾಗದೆ ಪುಸ್ತಕದ ಆಚೆಗಿನ ಜಗತ್ತನ್ನು ಚಿಕ್ಕಂದಿನಿಂದಲೇ ತಿಳಿದುಕೊಳ್ಳಬೇಕು ಎಂದು ಡಿಕೆಎಸ್ ಹಿಪ್ಪೊ ಕ್ಯಾಂಪಸ್ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷೆ ಗೌರಮ್ಮ ಕೆಂಪೇಗೌಡ ಹೇಳಿದರು.</p>.<p>ಇಲ್ಲಿನ ಕೋಡಿಹಳ್ಳಿ ಹೋಬಳಿ ಪ್ಲಾಂಟೇಷನ್ ಬಳಿಯಿರುವ ಡಿಕೆಎಸ್ ಹಿಪ್ಪೊ ಕ್ಯಾಂಪಸ್ ಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮಕ್ಕಳಿಗೆ ಪಾಠಕ್ಕಿಂತ ಆಟ ಆಡುವುದೆಂದರೆ ಹೆಚ್ಚು ಖುಷಿ. ಮಕ್ಕಳು ಆಟ ಆಡಿಕೊಂಡೇ ಬೆಳೆಯಬೇಕು. ಅದಕ್ಕಾಗಿ ಶಾಲೆಗಳಲ್ಲಿ ಮಕ್ಕಳಿಗೆ ಆಟದ ಮೂಲಕವೇ ಎಲ್ಲವನ್ನೂ ಕಲಿಸಬೇಕು. ಹೆಚ್ಚು ಸಮಯ ಆಟಕ್ಕೆ ಅವಕಾಶ ನೀಡಬೇಕೆಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.</p>.<p>ಶಾಲೆಯ ಮನೋಜ್ ಮತ್ತು ಯಶೋಧ ಕ್ರೀಡಾಜ್ಯೋತಿ ತಂದರು. ಶಾಂತಿಯ ಸಂಕೇತವಾಗಿ ಪಾರಿವಾಳಗಳನ್ನು ಹಾರಿಸಲಾಯಿತು. ಪುಣಾಣಿ ಮಕ್ಕಳು ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.</p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಮುನಿಹುಚ್ಚೇಗೌಡ, ಪಂಚಾಯಿತಿ ಸದಸ್ಯೆ ರಾಜೇಶ್ವರಿ, ಶಾಲೆಯ ಮುಖ್ಯ ಶಿಕ್ಷಕಿ ಆಂತೋಣಿ ಮೇರಿ, ಸಹ ಶಿಕ್ಷಕರಾದ ಆಶಾ, ಸಂಜನಾ ಕೈಲಾಸ್, ನೇತ್ರಾವತಿ, ದಿವ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>