ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗುವ ಚಿರತೆಗಳು ದನದ ಕೊಟ್ಟಿಗೆ, ಮನೆಯ ಆವರಣ, ಮನೆಯ ಕಾಂಪೌಂಡ್ ಒಳಗೆ ಇರುವ ಕೋಳಿ, ಕುರಿ, ಮೇಕೆ, ಹಸು, ಎಮ್ಮೆ ಕರು ಸೇರಿದಂತೆ ಸಾಕು ಪ್ರಾಣಿಗಳನ್ನು ಎಳೆದೊಯ್ದು ತಿಂದು ಹಾಕುತ್ತಿವೆ. ಇದರಿಂದ ರೈತರು ಆರ್ಥಿಕ ನಷ್ಟ ಹೊಂದುವಂತಾಗಿದೆ. ಚಿರತೆ ಸೆರೆ ಹಿಡಿದು ಅಗತ್ಯ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.