‘ದೂರಿನ ಮೇರೆಗೆ ದೇಸಿಗೌಡರ ಮನೆ ಬಳಿ ಬೋನ್ ಇಡಲಾಗಿದೆ. ಅರ್ಕಾವತಿ ನದಿ ದಡದಲ್ಲಿ ಮನೆ ಇದ್ದು, ನದಿ ಪಾತ್ರದಲ್ಲಿರುವ ಜೊಂಡಿನ ಕಡೆಯಿಂದ ಚಿರತೆ ಬಂದಿರುವ ಸಾಧ್ಯತೆ ಇದೆ. ಶ್ರೀರಾಮ ದೇವರ ಬೆಟ್ಟ ಸೇರಿದಂತೆ ಸುತ್ತಲು ಇರುವ ಅರಣ್ಯ ಪ್ರದೇಶದಿಂದ ಚಿರತೆ ಬಂದಿರಬಹುದು’ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದರು.