<p><strong>ರಾಮನಗರ</strong>: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಇದೇ 21ರಂದು ಹಮ್ಮಿಕೊಂಡಿರುವ ಧರಣಿಯಲ್ಲಿ ಜಿಲ್ಲೆಯ ನೌಕರರು ಪಾಲ್ಗೊಳ್ಳಬೇಕು ಎಂದು ಸಂಘದ ಜಿಲ್ಲಾ ಅಧ್ಯಕ್ಷ ಚಲಪತಿ ಮನವಿ ಮಾಡಿದರು.</p>.<p>ಧರಣಿ ಪೂರ್ವ ಸಿದ್ಧತೆ ಕುರಿತು ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪೌರ ಕಾರ್ಮಿಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ, ನೇರ ಪಾವತಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೇರ ಪಾವತಿ ಪೌರಕಾರ್ಮಿಕರು, ವಾಹನ ಚಾಲಕರು, ವಾಟರ್ಮನ್ಗಳು, ಡಾಟಾ ಎಂಟ್ರಿ ಆಪರೇಟರ್, ಯುಜಿಟಿ ಕಾರ್ಮಿಕರು ಧರಣಿಯಲ್ಲಿ ಪಾಲ್ಗೊಳ್ಳುವಂತೆ ಕೋರಿದರು.</p>.<p>ಬೇಡಿಕೆಗಳು: ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರಾಜು ಮಾತನಾಡಿ, ತಲಾ 500 ಜನಸಂಖ್ಯೆಗೆ ಒಬ್ಬ ಪೌರಕಾರ್ಮಿಕನನ್ನು ನಿಯೋಜಿಸಬೇಕು. ಬಾಕಿ ಹುದ್ದೆಗಳ ಭರ್ತಿ, ಹೊರಗುತ್ತಿಗೆ ಪದ್ಧತಿ ಬದಲು ನೇರ ವೇತನ ಪಾವತಿಯಡಿ ನೇಮಕ, ವಿಮೆ, ಆರೋಗ್ಯ ತಪಾಸಣೆ ಮೊದಲಾದ ಸೌಲಭ್ಯಗಳಿಗೆ ಒತ್ತಾಯಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಸರ್ಕಾರ ನಮ್ಮನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ. ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಶೋಷಣೆಗೆ ಒಳಪಡಿಸಿದೆ. ಸಕಾಲಕ್ಕೆ ಕನಿಷ್ಠ ವೇತನವೂ ನಮಗೆ ದೊರೆಯುತ್ತಿಲ್ಲ ಎಂದು<br />ದೂರಿದರು.</p>.<p>ಪದಾಧಿಕಾರಿಗಳಾದ ಕೊಂಡಲ್ ರಾವ್, ಎಲ್. ಚಂದ್ರಶೇಖರ್, ವೆಂಕಟರಾಮಣ್ಣ, ಫಾರೂಕ್, ವಾಸೀಂ, ಗಂಗಣ್ಣ, ಚಿಕ್ಕನರಸಯ್ಯ, ಶ್ರೀನಿವಾಸ್, ಮಹೇಂದ್ರ, ಗಣೇಶ್<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಇದೇ 21ರಂದು ಹಮ್ಮಿಕೊಂಡಿರುವ ಧರಣಿಯಲ್ಲಿ ಜಿಲ್ಲೆಯ ನೌಕರರು ಪಾಲ್ಗೊಳ್ಳಬೇಕು ಎಂದು ಸಂಘದ ಜಿಲ್ಲಾ ಅಧ್ಯಕ್ಷ ಚಲಪತಿ ಮನವಿ ಮಾಡಿದರು.</p>.<p>ಧರಣಿ ಪೂರ್ವ ಸಿದ್ಧತೆ ಕುರಿತು ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪೌರ ಕಾರ್ಮಿಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ, ನೇರ ಪಾವತಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೇರ ಪಾವತಿ ಪೌರಕಾರ್ಮಿಕರು, ವಾಹನ ಚಾಲಕರು, ವಾಟರ್ಮನ್ಗಳು, ಡಾಟಾ ಎಂಟ್ರಿ ಆಪರೇಟರ್, ಯುಜಿಟಿ ಕಾರ್ಮಿಕರು ಧರಣಿಯಲ್ಲಿ ಪಾಲ್ಗೊಳ್ಳುವಂತೆ ಕೋರಿದರು.</p>.<p>ಬೇಡಿಕೆಗಳು: ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರಾಜು ಮಾತನಾಡಿ, ತಲಾ 500 ಜನಸಂಖ್ಯೆಗೆ ಒಬ್ಬ ಪೌರಕಾರ್ಮಿಕನನ್ನು ನಿಯೋಜಿಸಬೇಕು. ಬಾಕಿ ಹುದ್ದೆಗಳ ಭರ್ತಿ, ಹೊರಗುತ್ತಿಗೆ ಪದ್ಧತಿ ಬದಲು ನೇರ ವೇತನ ಪಾವತಿಯಡಿ ನೇಮಕ, ವಿಮೆ, ಆರೋಗ್ಯ ತಪಾಸಣೆ ಮೊದಲಾದ ಸೌಲಭ್ಯಗಳಿಗೆ ಒತ್ತಾಯಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಸರ್ಕಾರ ನಮ್ಮನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ. ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಶೋಷಣೆಗೆ ಒಳಪಡಿಸಿದೆ. ಸಕಾಲಕ್ಕೆ ಕನಿಷ್ಠ ವೇತನವೂ ನಮಗೆ ದೊರೆಯುತ್ತಿಲ್ಲ ಎಂದು<br />ದೂರಿದರು.</p>.<p>ಪದಾಧಿಕಾರಿಗಳಾದ ಕೊಂಡಲ್ ರಾವ್, ಎಲ್. ಚಂದ್ರಶೇಖರ್, ವೆಂಕಟರಾಮಣ್ಣ, ಫಾರೂಕ್, ವಾಸೀಂ, ಗಂಗಣ್ಣ, ಚಿಕ್ಕನರಸಯ್ಯ, ಶ್ರೀನಿವಾಸ್, ಮಹೇಂದ್ರ, ಗಣೇಶ್<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>