<p>ಸಾತನೂರು (ಕನಕಪುರ): ‘ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛಮಾಡುವ ಮೂಲಕ ಸಾರ್ವಜನಿಕವಾಗಿ ಜನ ಜಾಗೃತಿ ಮೂಡಿಸುವುದು ನಮ್ಮ ಉದ್ದೇಶವಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುನಿಲ್ ತಿಳಿಸಿದರು.</p>.<p>ಇಲ್ಲಿನ ಸಾತನೂರು ಹೋಬಳಿ ಕಂಚನಹಳ್ಳಿ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿ ಮಾತನಾಡಿದರು.</p>.<p>ಸಾಮಾನ್ಯ ಜನರು ದೇವಸ್ಥಾನ, ಬಸದಿ, ಮಸೀದಿ, ಚರ್ಚ್ಗಳ ಬಗ್ಗೆ ಪವಿತ್ರ ಭಾವನೆ ಹೊಂದಿರುತ್ತಾರೆ. ಆ ಜಾಗಗಳು ಮಲಿನವಾಗಲು ಬಿಡುವುದಿಲ್ಲ. ಗ್ರಾಮ ಸ್ವಚ್ಛವಾಗಿರಲು ಜನರಲ್ಲಿ ಸ್ವಚ್ಛತೆಯ ಪರಿಕಲ್ಪನೆ ಬರಬೇಕು. ಅದಕ್ಕಾಗಿ ಧರ್ಮಸ್ಥಳದ ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದ್ದಾರೆ ಎಂದರು.</p>.<p>ಮಕರ ಸಂಕ್ರಾಂತಿ ವೇಳೆ ದೇವಾಲಯಗಳ ಸ್ವಚ್ಛತೆ ನಡೆಸಲು ಜ. 7 ರಿಂದ 13ರ ವರೆಗೂ ಸ್ವಚ್ಛತಾ ಸಪ್ತಾಹ ನಡೆಯಲಿದೆ. ರಾಜ್ಯದ ವಿವಿಧೆಡೆ ಇಲ್ಲಿಯವರೆಗೆ 9,037 ಶ್ರದ್ಧಾ ಕೇಂದ್ರಗಳನ್ನು ಗುರುತಿಸಿದ್ದು 2,99,863 ಸ್ವಯಂಸೇವಕರು ಈ ಸಪ್ತಾಹದಲ್ಲಿ ಭಾಗಿಯಾಗಲಿದ್ದಾರೆ ಎಂದರು.</p>.<p>ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಗಣ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಸಂಘ ಸಂಸ್ಥೆಗಳ ಸದಸ್ಯರು ಕೈ ಜೋಡಿಸಿದ್ದಾರೆ ಎಂದರು.</p>.<p>ದೇವಸ್ಥಾನ, ಕಲ್ಯಾಣಿ, ಸಭಾಭವನ, ಅಶ್ವತ್ಥಕಟ್ಟೆ, ಸ್ನಾನಕಟ್ಟೆ, ನದಿ ತೀರಗಳು, ಮಸೀದಿಗಳು, ಚರ್ಚ್ಗಳು, ಬಸದಿಗಳು, ಸಾರ್ವಜನಿಕ ಶೌಚಾಲಯ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ನಡೆಯಲಿದೆ. ಜಾತ್ರೆ, ವಿಶೇಷ ದಿನಗಳಲ್ಲಿ ವಿಶೇಷ ತಂಡ ರಚಿಸಿ ಸ್ವಚ್ಛಗೊಳಿಸಲಾಗುವುದು. ಪ್ಲಾಸ್ಟಿಕ್ ಬಳಸದಂತೆ ಹಾಗೂ ಬಟ್ಟೆ ಕೈ ಚೀಲವನ್ನು ಬಳಸುವಂತೆ ಜನ ಜಾಗೃತಿ ಮೂಡಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾತನೂರು (ಕನಕಪುರ): ‘ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛಮಾಡುವ ಮೂಲಕ ಸಾರ್ವಜನಿಕವಾಗಿ ಜನ ಜಾಗೃತಿ ಮೂಡಿಸುವುದು ನಮ್ಮ ಉದ್ದೇಶವಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುನಿಲ್ ತಿಳಿಸಿದರು.</p>.<p>ಇಲ್ಲಿನ ಸಾತನೂರು ಹೋಬಳಿ ಕಂಚನಹಳ್ಳಿ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿ ಮಾತನಾಡಿದರು.</p>.<p>ಸಾಮಾನ್ಯ ಜನರು ದೇವಸ್ಥಾನ, ಬಸದಿ, ಮಸೀದಿ, ಚರ್ಚ್ಗಳ ಬಗ್ಗೆ ಪವಿತ್ರ ಭಾವನೆ ಹೊಂದಿರುತ್ತಾರೆ. ಆ ಜಾಗಗಳು ಮಲಿನವಾಗಲು ಬಿಡುವುದಿಲ್ಲ. ಗ್ರಾಮ ಸ್ವಚ್ಛವಾಗಿರಲು ಜನರಲ್ಲಿ ಸ್ವಚ್ಛತೆಯ ಪರಿಕಲ್ಪನೆ ಬರಬೇಕು. ಅದಕ್ಕಾಗಿ ಧರ್ಮಸ್ಥಳದ ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದ್ದಾರೆ ಎಂದರು.</p>.<p>ಮಕರ ಸಂಕ್ರಾಂತಿ ವೇಳೆ ದೇವಾಲಯಗಳ ಸ್ವಚ್ಛತೆ ನಡೆಸಲು ಜ. 7 ರಿಂದ 13ರ ವರೆಗೂ ಸ್ವಚ್ಛತಾ ಸಪ್ತಾಹ ನಡೆಯಲಿದೆ. ರಾಜ್ಯದ ವಿವಿಧೆಡೆ ಇಲ್ಲಿಯವರೆಗೆ 9,037 ಶ್ರದ್ಧಾ ಕೇಂದ್ರಗಳನ್ನು ಗುರುತಿಸಿದ್ದು 2,99,863 ಸ್ವಯಂಸೇವಕರು ಈ ಸಪ್ತಾಹದಲ್ಲಿ ಭಾಗಿಯಾಗಲಿದ್ದಾರೆ ಎಂದರು.</p>.<p>ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಗಣ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಸಂಘ ಸಂಸ್ಥೆಗಳ ಸದಸ್ಯರು ಕೈ ಜೋಡಿಸಿದ್ದಾರೆ ಎಂದರು.</p>.<p>ದೇವಸ್ಥಾನ, ಕಲ್ಯಾಣಿ, ಸಭಾಭವನ, ಅಶ್ವತ್ಥಕಟ್ಟೆ, ಸ್ನಾನಕಟ್ಟೆ, ನದಿ ತೀರಗಳು, ಮಸೀದಿಗಳು, ಚರ್ಚ್ಗಳು, ಬಸದಿಗಳು, ಸಾರ್ವಜನಿಕ ಶೌಚಾಲಯ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ನಡೆಯಲಿದೆ. ಜಾತ್ರೆ, ವಿಶೇಷ ದಿನಗಳಲ್ಲಿ ವಿಶೇಷ ತಂಡ ರಚಿಸಿ ಸ್ವಚ್ಛಗೊಳಿಸಲಾಗುವುದು. ಪ್ಲಾಸ್ಟಿಕ್ ಬಳಸದಂತೆ ಹಾಗೂ ಬಟ್ಟೆ ಕೈ ಚೀಲವನ್ನು ಬಳಸುವಂತೆ ಜನ ಜಾಗೃತಿ ಮೂಡಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>