ಜೆಡಿಎಸ್ ಮುಖಂಡ ಶಿವರುದ್ರೇಗೌಡ ಮಾತನಾಡಿ, ‘ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ನಮಗೆ ಹೆಚ್ಚು ಲಾಭವಾಗಲಿದೆ. ನಮ್ಮ ಮನೆಯ ಸುತ್ತ ಚರಂಡಿಗಳಲ್ಲಿ ನೀರು ನಿಲ್ಲದಂತೆ, ಕಸ ಕೊಳೆಯದಂತೆ ನೋಡಿಕೊಳ್ಳಬೇಕು. ಇದರಿಂದ ಮಳೆಗಾಲದಲ್ಲಿ ಡೆಂಗಿ, ಸಾಂಕ್ರಾಮಿಕ ಕಾಯಿಲೆ ಹರಡುವುದನ್ನು ತಡೆಗಟ್ಟಬಹುದಾಗಿದೆ. ಸಾರ್ವಜನಿಕರು ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಬೇಕು’ ಎಂದು ಮನವಿ ಮಾಡಿದರು.